Category Archives: ದಿನಾಚರಣೆಗಳು.

ಮಹಾನುಭಾವರ ಜಯಂತಿಗಳು.

“ಕಾಯಕವೇ ಕೈಲಾಸ” (Work is Workship) ಪ್ರತಿಯೊಬ್ಬರೂ ತಮ್ಮ ತಮ್ಮ ಜೀವನೋಪಾಯಕ್ಕಾಗಿ ಒಂದು ವೃತ್ತಿಯನ್ನು ಮಾಡಲೇಬೇಕು. ಮಾಡುವ ಕೆಲಸದಲ್ಲಿಯೇ ದೇವರನ್ನು ಕಾಣಬೇಕು. ಕೆಲಸವೇ ಪೂಜೆ, ಕೆಲಸವೇ ದೇವರು. ಕೆಲಸದಲ್ಲಿಯೇ ಕೈಲಾಸವನ್ನು ಕಾಣಬೇಕೆಂದು ಹೇಳಿದವರು ಜಗಜ್ಯೋತಿ ಬಸವೇಶ್ವರರು._ _ವಿಶ್ವಗುರು ಬಸವಣ್ಣನವರು ಪರಮಾತ್ಮನ ಕರುಣೆಯ ಕಂದರಾಗಿ ಅವತರಿಸಿದರು._ _ಇಂಗಳೇಶ್ವರ ಬಾಗೇವಾಡಿಯಲ್ಲಿ ಶೈವ ಬ್ರಾಹ್ಮಣ ದಂಪತಿಗಳಾದ ಮಾದರಸ-ಮಾದಲಾಂಬಿಕೆಯ ಮಗನಾಗಿ ಆನಂದನಾಮ_ ಸಂವತ್ಸರದಲ್ಲಿ _ವೈಶಾಖಮಾಸದ ಅಕ್ಷಯ ತೃತೀಯದಂದು ಏಪ್ರಿಲ್ 30 1134 ರೋಹಿಣ ನಕ್ಷತ್ರದಲ್ಲಿ ಜನಿಸಿದರು. ಯಾವುದೇ_ _ಅಂಧಶ್ರದ್ಧೆ ಜಡ ಸಂಪ್ರದಾಯಗಳನ್ನೊಪ್ಪದ ಸತ್ಯಾನ್ವೇಷಕರಾಗಿ ಹೆತ್ತವರನ್ನು, ಬಂಧು-ಬಾಂಧವರನ್ನು ತೊರೆದು ವಿದ್ಯಾಕಾಂಕ್ಷಿಯಾಗಿ ಕೂಡಲ ಸಂಗಮದ ಗುರುಕುಲಕ್ಕೆ ಹೋದರು. ಶಾಸ್ತ್ರಾಧ್ಯಯನ, ಯೋಗಾಭ್ಯಾಸಗಳಲ್ಲಿ ಬಾಲ್ಯವನ್ನು ಕಳೆದು ತಾರುಣ್ಯಕ್ಕೆ ಕಾಲಿರಿಸಿದರು. ಜನರಲ್ಲಿ ಮನೆ ಮಾಡಿಕೊಂಡಿದ್ದ ಮೌಢ್ಯತೆ, ಕಂದಾಚಾರ,_ _ಜಾತೀಯತೆಗಳನ್ನು ಕಂಡು ಮನನೊಂದು ಪರಿಹಾರವನ್ನು ಅರಸತೊಡಗಿದರು. ಎಲ್ಲ ದೇವರನ್ನು ಮೀರಿದ ಸೃಷ್ಟಿಕರ್ತನೇ ಶ್ರೇಷ್ಠವೆಂದು ಘೋಷಿಸಿ ಆ ದೇವನನ್ನು ಲಿಂಗದೇವ ಎಂದು ಕರೆದರು. ನಿರಾಕಾರ ದೇವನಿಗೆ ಮನುಷ್ಯರ ಪ್ರಾಣ ಗಳ ಆಕಾರ ಕೊಡುವುದು ಸರಿಯಲ್ಲ ಎಂಬ ಭಾವ ತಳೆದು ದೇವನ ಸಾಕಾರ ಕೃತಿಯೇ ಬ್ರಹ್ಮಾಂಡ ಇದು ಗೋಲಾಕಾರದಲ್ಲಿದೆ. ಆದ್ದರಿಂದ ಲಿಂಗದೇವನನ್ನು ವಿಶ್ವಾದಾಕಾರದಲ್ಲಿ ಪೂಜಿಸುವುದು ಸರಿ ಎಂದು ಇಷ್ಟ ಲಿಂಗದ ಪರಿಕಲ್ಪನೆ ನೀಡಿದರೂ, ದೇವರ ಕುರುಹಾದ ಇಷ್ಟಲಿಂಗವು ಮಾನವನ ಜಾತಿ, ವರ್ಣ, ವರ್ಗ ಭೇದಗಳನ್ನು ಕಳೆದು ಶರಣನಾಗಬೇಕು._ _ನವ ಸಮಾಜ ನಿರ್ಮಾಣದ ರೂಪುರೇಷಗಳನ್ನು ತಮ್ಮ ಮನದಲ್ಲಿ ಹೊಂದಿ ಕಲ್ಯಾಣದ ಕಾರ್ಯಕ್ಷೇತ್ರವನ್ನು_ _ಪ್ರವೇಶಿಸಿದರು. ಸೋದರ ಮಾವನ ಮಗಳು ನೀಲಾಂಬಿಕೆಯನ್ನು ವಿವಾಹವಾಗಿ ಕರಣ ಕ ಕಾಯಕ ಕೈಗೊಂಡರು. ಅಲ್ಲಿಂದ ಮುಂದೆ ಭಂಡಾರಿಯಾಗಿ ಪ್ರಧಾನಿ (ದಂಡನಾಯಕ) ಯಾಗಿ ಕಾರ್ಯ ನಿರ್ವಹಿಸಿದರು._ _ಬಸವ ಕಲ್ಯಾಣದಲ್ಲಿ ಬಸವಣ್ಣನವರು ಶರಣರ ಜೊತೆ ಸೇರಿ ಅನುಭವ ಮಂಟಪ_ _ಸ್ಥಾಪಿಸಿದರು. ಅನುಭವ ಮಂಟಪವು ವಿಶ್ವ ಮಾನವ ಸಂದೇಶ ಮತ್ತು ವಿಚಾರಗಳ ಬಗೆಗೆ ಮುಕ್ತವಾಗಿ ಚರ್ಚಿಸಬಹುದಾದ ವೇದಿಕೆಯಾಗಿದೆ_ . _ಅನುಭವ ಮಂಟಪದಿಂದ ಧರ್ಮ ಪ್ರಚಾರ ಮಾಡಿದರು. ಎಲ್ಲರ ಮನಗಳ ಬಾಗಿಲಿಗೂ ಧರ್ಮಗಂಗೆ ಹರಿಯುವಂತೆ ಮಾಡಿದರು. ಇಷ್ಟಲಿಂಗವೆಂಬ_ _ಗಣಲಾಂಛನವನ್ನು ಧರಿಸಿ ಲಿಂಗಾಯತರಾದ ಎಲ್ಲ ಶರಣ ಬಂಧುಗಳನ್ನು ಸಮಾನ ಭಾವದಿಂದ ಕಂಡರು._
_ಮಂಗಳವೇಡದ ರಾಜ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾದ ಬಸವಣ್ಣ ಹಲವಾರು ಜನಪರ ಮತ್ತು ಸಮಾಜ ಸುಧಾರಣೆ ಕ್ರಮಗಳನ್ನು ಕೈಗೊಂಡರು. ಕಾಯಕವೇ ಕೈಲಾಸವೆಂದು ಸಾರಿದರು. ಅಸ್ಪ್ರಶ್ಯತೆಯ ಹೆಸರಿನಲ್ಲಿ ಊರ ಹೊರಗೆ ಇರಿಸಲಾದ ದಲಿತರನ್ನು ಕರೆತಂದು ಸಮಾಜದ ಭಾಗವನ್ನಾಗಿ ಮಾಡಿದರು_ . _ದೇವಾಲಯ, ಕುಡಿಯುವ ನೀರಿನ ಬಾವಿ-ಕೆರೆಗಳನ್ನು ಬಳಸಲು ಇವರಿಗೂ ಸಮಾನ ಹಕ್ಕಿದೆಯಂದು ತೋರಿಸಿದರು._ _“ಉಳ್ಳವರು ಶಿವಾಲಯ ಮಾಡುವರು ನಾನೇನು ಮಾಡಲಿ ಬಡವನಯ್ಯ”_ _ಎಂದು ಬಸವಣ್ಣನವರು ಪುರೋಹಿತಶಾಹಿ ವ್ಯವಸ್ಥೆ ಮತ್ತು ಧರ್ಮದ ಹೆಸರಿನಲ್ಲಿ ಜನಸಾಮಾನ್ಯರ_ _ಶೋಷಣೆಯನ್ನು ಖಂಡಿಸಿದ್ದರು. ಬ್ರಾಹ್ಮಣ ಸಮಾಜದ ಶರಣರಾದ ಮಧುವರಸರ ಮಗಳನ್ನು ಸಮಗಾರ ಸಮಾಜದ ಶರಣರಾದ ಹರಳಯ್ಯನವರ ಮಗನಿಗೆ ಕೊಟ್ಟು ವಿವಾಹ ಮಾಡಲು ಪ್ರೇರಣೆ ನೀಡಿದರು._ _ಈ ವಿವಾಹದಿಂದ ಸಂಪ್ರದಾಯವಾದಿಗಳು ಸಿಡಿದೆದ್ದು ಬಿಜ್ಜಳ ಮಹಾರಾಜನನ್ನು ಬಸವಣ್ಣನವರ ವಿರುದ್ಧ ಪ್ರೇರೇಪಿಸಿ ಬಸವಣ್ಣನವರಿಗೆ ಗಡಿಪಾರು ಶಿಕ್ಷೆ ನೀಡುವಂತೆ ಮಾಡಿದರು. ಧರ್ಮಪಿತರು ಗಡಿಪಾರು ಶಿಕ್ಷೆ ಸ್ವೀಕರಿಸಿ ಕಲ್ಯಾಣದಿಂದ ಹೊರಟ ನಂತರ ಹರಳಯ್ಯ, ಮಧುವರಸ, ಶೀಲವಂತರ ಬಂಧನ ಮಾಡಿ ಅವರು ವರ್ಣಾಂತರ_ _ವಿವಾಹದಲ್ಲಿ ಭಾಗಿಯಾದುದಕ್ಕಾಗಿ ಕಣ್ಣು ಕೀಳಿಸುವ ಶಿಕ್ಷೆ._ _ಎಳೆ ಹೊಟ್ಟೆ ಶಿಕ್ಷೆಗೆ ಒಳಗಾಗಿ ಪ್ರಾಣ ಬಿಡಬೇಕಾಯಿತು. ಜಾತಿವಾದಿಗಳು ವಚನ ಸಾಹಿತ್ಯವನ್ನು ನಾಶ ಮಾಡಲು ಸನ್ನದ್ಧರಾದಾಗ ವೀರಮಾತೆ ಅಕ್ಕನಾಗಲಾಂಬಿಕೆ, ಚೆನ್ನಬಸವಣ್ಣ, ವೀರ ಗಣಾಚಾರಿ, ಮಡಿವಾಳ, ಮಾಚಯ್ಯನವರು ವೀರಾಗ್ರಣ ಗಳಾಗಿ ಕಾದಾಡಿ ವಚನ ಸಾಹಿತ್ಯ ನಿಧಿಯನ್ನು ಉಳಿಸಿಕೊಟ್ಟರು._ _ಇದೇ ಸಮಯದಲ್ಲಿ ಚೆನ್ನಬಸವಣ್ಣನವರು ಉತ್ತರ ಕನ್ನಡ ಜಿಲ್ಲೆಯ ಉಳವಿಗೆ ಬಂದು ನೆಲೆಸಿದರು._
_ಬಸವಣ್ಣನವರು 1196 ರಲ್ಲಿ ಕೂಡಲಸಂಗಮಕ್ಕೆ ಮರಳಿ ಬಂದರು. 7 ಜುಲೈ 1196 ನಳನಾಮ ಸಂವತ್ಸರದ_ _ಶ್ರಾವಣ ಶುದ್ಧ ಪಂಚಮಿಯಂದು ಉರಿಯುಂಡ ಕರ್ಪೂರದಂತೆ ಲಿಂಗೈಕ್ಯರಾದರು. ಅವರ ಸಮಾಧಿಯು ಅಲ್ಲಯೇ ಇದೆ._ _ಅವರ ಸಮಾಧಿಯನ್ನು ಕರ್ನಾಟಕ ಸರಕಾರದಿಂದ ಬಸವ ಸಾಗರ ಹಿನ್ನೀರಿನಲ್ಲಿ ಮುಳಗದಂತೆ ರಕ್ಷಿಸಿಲ್ಪಟ್ಟಿದೆ._
REPORT THIS AD

_ಬಸವಣ್ಣನವರ ತತ್ವಗಳು:-_
_ದೇವನೊಬ್ಬ ನಾಮ ಹಲವು ನಮ್ಮನ್ನೆಲ್ಲ ಸೃಷ್ಟಿಸಿದ ದೇವರು ಒಬ್ಬನೇ, ಮಾನವನಿಗೆ ಯಾವುದೇ ರೀತಿ_ _ಜಾತಿಕುಲಗಳಿಲ್ಲ ಮಾನವ ಜಾತಿ ಒಂದೇ. ಸ್ವರ್ಗ-ನರಕಗಳು ಬೇರಿಲ್ಲ :- ಪಾಪ-ಪುಣ್ಯ ಫಲವಾಗಿ ಸ್ವರ್ಗ-ನರಕಗಳು ಬೇರಿಲ್ಲ, ಅಯ್ಯಾ ಎಂದೊಡಿ ಸ್ವರ್ಗ, ಎಲವೇ ಎಂದರೆ ನರಕ, ಆಚಾರವೇ ಸ್ವರ್ಗ,_ ಅನಾಚಾರವೇ ನರಕ, ಸತ್ಯ _ನುಡಿವುದೇ ದೇವಲೋಕ ಮಿಥ್ಯ ನುಡಿಯುವುದೇ ಮೃತ್ರ್ಯಲೋಕ ಎಂದು ತಿಳಿಸಿದರು. ದಯವೇ ಧರ್ಮದ ಮೂಲ_ :- _ಯಾವುದೇ ಧರ್ಮದ ಮೂಲ ದಯೆ ದಯವಿಲ್ಲದ ಧರ್ಮ ಅದಾವುದಯ್ಯ? ದಯವಿರಬೇಕು ಸಕಲ ಪ್ರಾಣ ಗಳೆಲ್ಲರಲ್ಲಿ ಎಂದು ತಿಳಿಸಿ ಹಿಂಸಾಚಾರವನ್ನು ತಡೆಗಟ್ಟಿದರು._
_ಕಾಯಕವೇ ಕೈಲಾಸ :-_ _ಪ್ರತಿಯೊಬ್ಬರೂ ತಮ್ಮ ತಮ್ಮ ಜೀವನೋಪಾಯಕ್ಕಾಗಿ ಒಂದು ವೃತ್ತಿಯನ್ನು ಮಾಡಲೇ ಬೇಕಾಗುವುದು. ಅದರಲ್ಲಿಯೇ ದೇವರನ್ನು ಕಾಣ ರೋ ಎಂದರು._ _ಸಮತಾವಾದ :- ನಮ್ಮ ದೇಶದಲ್ಲಿ 12 ನೇ ಶತಮಾನದಲ್ಲಿ ಸಮತಾವಾದದ ಬೀಜ ಬಿತ್ತಿದ ಪ್ರಥಮ ವ್ಯಕ್ತಿ_ _ಎಂದರೆ ಶ್ರೀ ಬಸವಣ್ಣನವರು. ಜಾತಿ ಪದ್ಧತಿಗಳು ಕೇವಲ ಉದ್ಯೋಗದಿಂದ ಹುಟ್ಟಿ ಬಂದವುಗಳು, ಅವುಗಳನ್ನು ನಾವೇ ಮಾಡಿಕೊಂಡಿದ್ದೇವೆ. ಆದರೆ ಮಾನವ ಜಾತಿ ಒಂದೇ._
_ಬಸವಣ್ಣನವರ ಶೈಕ್ಷಣ ಕ ವಿಚಾರಗಳು :-_
ಪ್ರತಿಯೊಬ್ಬರು ಕಲಿಯುವಂತಾಗಬೇಕು, ಮೂಢ ನಂಬಿಕೆಗಳನ್ನು ಬಿಡುವುದು, ಕಾಯಕದ ಮಹತ್ವ, ಸಮಾನತೆ, ಸ್ತ್ರೀ ಶಿಕ್ಷಣ ನೈತಿಕತೆ ಸಮಾಜದ ಜನರು ಒಳ್ಳೆಯವರಾದರೆ ಉತ್ತಮ ಸಮಾಜ ಕಟ್ಟಬಹುದೆಂದು ತೋರಿಸಿಕೊಟ್ಟರು._
_“ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ”ಎಂದು ಜಗಜ್ಯೋತಿ ಬಸವಣ್ಣನವರು ಹೇಳಿದರು.
****
ಜನನ ಜನವರಿ ೨೩,೧೮೯೭,ಕಟಕ್, ಒರಿಸ್ಸಾ
ಮರಣ ಆಗಸ್ಟ್ ೧೮, ೧೯೪೫
ಟೈಪೈ, ಟೈವಾನ್ (ಸಂಭಾವಿತ)
ಮರಣದ ಕಾರಣ ವಿಮಾನ ಅಪಘಾತ (ಸಂಭಾವಿತ)
ಇದಕ್ಕೆ ಪ್ರಸಿದ್ಧ ಭಾರತದ ಸ್ವಾತಂತ್ರ್ಯ ಸಂಗ್ರಾಮ, ಭಾರತೀಯ ರಾಷ್ಟ್ರೀಯ ಸೇನೆ
ಶೀರ್ಷಿಕೆ ನೇತಾಜಿ, ಆಜಾದ್ ಹಿಂದ್ ಮುಖ್ಯಸ್ಥ
ರಾಜಕೀಯ ಪಕ್ಷ ಫಾರ್ವರ್ಡ್ ಬ್ಲಾಕ್
ಧರ್ಮ ಹಿಂದು
ಸಂಗಾತಿ(ಗಳು) ಎಮಿಲಿ ಶೆಂಕ್ಲ್
ಮಕ್ಕಳು ಅನಿತ ಬೋಸ್ ಫಾಫ್.
ಸುಭಾಷ್ ಚಂದ್ರ ಬೋಸ್ (সুভাষ চন্দ্র বসু; ಜನನ: ಜನವರಿ ೨೩, ೧೮೯೭ — ಮರಣ (ಸಂಭಾವಿತ): ಆಗಸ್ಟ್ ೧೮, ೧೯೪೫) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.
●ಜನನ, ಜೀವನ
ಸುಭಾಷ್‌ಚಂದ್ರ ಬೋಸ್ ಜನಿಸಿದ್ದು ೧೮೯೭ರ ಜನವರಿ ೨೩ರಂದು, ಒರಿಸ್ಸಾದ ಕಟಕ್‌ನಲ್ಲಿ. ತಂದೆ ಜಾನಕೀನಾಥ ಬೋಸ್, ತಾಯಿ ಪ್ರಭಾವತಿ. ಆ ದಂಪತಿಗಳ ೯ ಮಕ್ಕಳಲ್ಲಿ ಸುಭಾಷ್ ೬ನೇ ಯವರು.ಕಟಕ್‌ನಲ್ಲಿ ರ‍್ಯಾವೆನ್‌ಶಾ ಕೊಲಿಜಿಯೇಟ್ ಶಾಲೆಯಲ್ಲಿ ಪ್ರಾಥಮಿಕ ವ್ಯಾಸಂಗ, ಅಲ್ಲಿ ಮುಖ್ಯೋಪಾಧ್ಯಾಯ ಬೇಣಿಮಾಧವದಾಸ್‌ರ ರಿಂದ ಪ್ರೇರಣೆ, ಮುಂದೆ ವಿವೇಕಾನಂದರ ಸಾಹಿತ್ಯಗಳು, ಪತ್ರಗಳು ಮತ್ತು ’ಕೊಲೊಂಬೋದಿಂದ ಆಲ್ಮೋರಾಕ್ಕೆ’ ಉಪನ್ಯಾಸಗಳಿಂದ ಪ್ರಭಾವಿತರಾದ ಬೋಸರು ಅರವಿಂದರ ’ಆರ್ಯ’ ಮಾಸಪತ್ರಿಕೆಯ ತಪ್ಪದ ಓದುಗ!
೧೯೧೯ರಲ್ಲಿ ತತ್ವಶಾಸ್ತ್ರ ವಿಭಾಗದಲ್ಲಿ ಬಿ.ಎ. ಪದವಿ, ನಂತರ ೧೯೧೯ರ ಸೆಪ್ಟೆಂಬರ್ ೧೫ರಂದು ಐ.ಸಿ.ಎಸ್ ಪರೀಕ್ಷೆಗಾಗಿ ಇಂಗ್ಲೆಂಡಿಗೆ ಪಯಣ. ೧೯೨೦ರ ಸೆಪ್ಟಂಬರ್‌ನಲ್ಲಿ ನಾಲ್ಕನೇ ಸ್ಥಾನಿಗರಾಗಿ ಐ.ಸಿ.ಎಸ್ ಪದವಿ ಪ್ರಾಪ್ತಿ.ವಿದೇಶೀ ನೌಕರಿ ಒಲ್ಲೆ ಎಂದು ಗಳಿಸಿದ್ದ ಐ.ಸಿ.ಎಸ್. ಪದವಿಯನ್ನು ೧೯೨೧ರ ಎಪ್ರಿಲ್ ೨೨ರಂದು ಬ್ರಿಟಿಷ್ ಸರ್ಕಾರದ ಭಾರತ ವ್ಯವಹಾರ ಸಚಿವ ಎಡ್ವಿನ್ ಮಾಂಟೆಗುಗೆ ಪತ್ರವೊಂದನ್ನು ಬರೆದು ಮರಳಿಸಿದ್ದರು ಬೋಸ್!
೨೦ ತಿಂಗಳ ಇಂಗ್ಲೆಂಡ್ ವಾಸದ ನಂತರ ೧೯೨೧ರ ಜುಲೈ ೧೬ರಂದು ಮುಂಬಯಿಗೆ ಮರಳಿದರು ಬೋಸ್. ಅಂದೇ ಗಾಂಧೀಜಿ ಜತೆ ಮೊದಲ ಭೇಟಿ.೧೯೨೧ರ ಆಗಸ್ಟ್‌ನಿಂದ ಚಿತ್ತರಂಜನ್‌ದಾಸ್‌ರ ಮಾರ್ಗದರ್ಶನದಲ್ಲಿ ಯುವಕರ ಸಂಘಟನೆಗೆ ಆದ್ಯತೆ. ಚಳುವಳಿಯ ಸಂದರ್ಭವೊಂದರಲ್ಲಿ ಮ್ಯಾಜಿಸ್ಟ್ರೇಟರು ೬ ತಿಂಗಳ ಸಜೆ ಘೋಷಿಸಿದಾಗ ’ಬರಿಯ ೬ ತಿಂಗಳೇ? ನನ್ನದೇನು ಕೋಳಿಕದ್ದ ಅಪರಾಧವೇ?’ ಎಂದಿದ್ದರು ಬೋಸ್!
●ರಾಷ್ಟ್ರ ನಿರ್ಮಾಣದ ಜವಾಬ್ದಾರಿ.
ರಾಷ್ಟ್ರ ನಿರ್ಮಾಣದ ಜವಾಬ್ದಾರಿಯುತ ಸ್ಥಾನದಲ್ಲಿದ್ದು ರಾಷ್ಟ್ರಹಿತಕ್ಕೆ ಧಕ್ಕೆಯಾಗುವ ಯಾವುದೇ ವಿಷಯಗಳಲ್ಲಿ ದುರ್ಬಲನೀತಿ ಹೊಂದಿರಬಾರದೆಂಬ ಸುಭಾಷ್‌ರ ದಿಟ್ಟನಿಲುವಿನ ಪ್ರತಿಧ್ವನಿಯಾಗಿತ್ತು ಆ ಮಾತು. ಕಾಂಗ್ರೆಸ್‌ನ ಬಲಹೀನ ನಾಯಕತ್ವ, ದುರ್ಬಲ ಒಪ್ಪಂದಗಳು, ಸ್ವಾಭಿಮಾನ ಶೂನ್ಯ ವರ್ತನೆಗೆ ಪ್ರತಿಯಾಗಿ ಆತ್ಮಾಭಿಮಾನದ ಸ್ವರಾಜ್ಯಹೋರಾಟಕ್ಕೆ ಬಲತುಂಬಿದವರು ಸುಭಾಷರು.
ತಾನು ಕಷ್ಟಪಟ್ಟುಗಳಿಸಿದ್ದ ಐ.ಸಿ.ಎಸ್. ಪದವಿಯನ್ನೇ ತಿರಸ್ಕರಿಸಿ, ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮುಕಿದ ಬೋಸ್‌ರಿಗಿದ್ದ ರಾಜಕೀಯ ಚಿಂತನೆಯ ವೈಶಾಲ್ಯತೆ ಆ ಕಾಲಮಾನದ ಯಾರೊಬ್ಬರಲ್ಲೂ ಇರಲಿಲ್ಲ. ಆಸ್ಟ್ರಿಯಾ, ಇಂಗ್ಲೆಂಡ್, ಜರ್ಮನಿ, ಜಪಾನ್ ಸೇರಿದಂತೆ ಹತ್ತಾರು ರಾಷ್ಟ್ರಗಳಲ್ಲಿ ಮಿಂಚಿನ ಓಡಾಟ ನಡೆಸಿ ಭಾರತೀಯ ಸ್ವರಾಜ್ಯ ಹೋರಾಟದ ದನಿಗೆ ತೀವ್ರತೆ ತಂದಿದ್ದ ಬೋಸರು, ತಾನು ನಂಬಿದ್ದ ಕ್ರಾಂತಿಪಥದಲ್ಲಿ ಎಂದೂ ರಾಜಿಮಾಡಿದವರಲ್ಲ.
ಶೀಘ್ರ ಸ್ವಾತಂತ್ರ್ಯಪ್ರಾಪ್ತಿಗಾಗಿ ಅವರು ಮಂಡಿಸುತ್ತಿದ್ದ ವಾದಗಳು, ಅದಕ್ಕಾಗಿ ಶ್ರಮಿಸಬೇಕಾದ ತ್ವರಿತ ಸಿದ್ಧತೆಗಳ ಕುರಿತು ಬೋಸ್‌ರ ನಿಲುವುಗಳೆಲ್ಲ ಕಾಂಗ್ರೆಸ್‌ನ ಮಂದಗಾಮಿ ಗುಂಪಿಗೆ ಅಸಹ್ಯವಾಗಿತ್ತು. ಸ್ವತಃ ಗಾಂಧೀಜಿಯವರೇ ಹಲವು ಬಾರಿ ಬೋಸ್‌ರನ್ನು ಟೀಕಿಸಿದ್ದರು! ಅವರಿಗೆ ದೂರಗಾಮಿ ಚಿಂತನೆ ಇಲ್ಲ ಎಂಬ ಆರೋಪ.
ಆದರೆ ೧೯೩೮ರಲ್ಲಿ ಭಾರತದ ವಿಭಜನೆಯ ಮುಸ್ಲಿಂಲೀಗ್- ಬ್ರಿಟಿಷರ ತಂತ್ರಗಾರಿಕೆಯ ಕುರಿತು ಮೊದಲಬಾರಿಗೆ ಬಹಿರಂಗವಾಗಿ ಎಚ್ಚರಿಸಿದರೂ ಮಂದಗಾಮಿಗಳಿಗೆ ಕೇಳಿಸಲಿಲ್ಲ. ಪರಿಣಾಮವಾಗಿ ೯ ವರ್ಷದಲ್ಲೇ ದೇಶ ಹೋಳಾಯಿತು! ಬೋಸ್‌ರ ದೂರಗಾಮಿ ಚಿಂತನೆಗಳಿಗೂ ಕವಡೆ ಕಿಮ್ಮತ್ತಿನ ಬೆಲೆ ಕೊಡದ ಕಾಂಗ್ರೆಸ್‌ನಿಂದ ಸ್ವತಃ ಹೊರಬಂದವರು ಬೋಸ್.
●ಸ್ವರಾಜ್ಯಪಕ್ಷ ಸ್ಥಾಪನೆ
ಕಾಂಗ್ರೆಸ್‌ನ ಡೋಲಾಯಮಾನ ನೀತಿಗಳಿಗೆ ಬೇಸತ್ತು ಚಿತ್ತರಂಜನ್‌ದಾಸ್‌ರಿಂದ ’ಸ್ವರಾಜ್ಯಪಕ್ಷ ಸ್ಥಾಪನೆ. ಬೋಸ್‌ರು ದಾಸ್‌ರ ಜತೆಗೇ ಚಟುವಟಿಕೆಗಳಲ್ಲಿ ಭಾಗಿ. ೧೯೨೩ರ ಅಕ್ಟೋಬರ್‌ನಿಂದ ದಾಸ್‌ರು ಸ್ಥಾಪಿಸಿದ್ದ ’ಫಾರ್ವರ್ಡ್’ ದಿನಪತ್ರಿಕೆಯ ನಿರ್ವಹಣೆಯ ಜವಾಬ್ದಾರಿ. ೧೯೨೫ರ ಜೂನ್ ೧೬, ದಾಸ್‌ರ ನಿಧನ, ಕ್ರಾಂತಿಕಾರಿ ಚಟುವಟಿಕೆಗಳಿಗಾಗಿ ಬೋಸ್‌ರ ಬಂಧನ, ಬಿಡುಗಡೆ.
೧೯೨೭ರ ನವೆಂಬರ್‌ನಲ್ಲಿ ಬಂಗಾಳಪ್ರದೇಶ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆ, ಆದರೆ ಗಾಂಧಿ ಪ್ರಣೀತ ಮಂದ ಮಾರ್ಗಕ್ಕಿಂತ ಸುಭಾಷ್‌ರದು ತೀರಾ ಭಿನ್ನ ಎಂಬುದು ಕ್ರಮೇಣ ಗೊತ್ತಾಯಿತು. ಹತ್ತಾರು ಚಳುವಳಿಗೆ ನೇತೃತ್ವ, ಅಖಿಲಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆ.೧೯೩೩, ಫೆಬ್ರವರಿ ೨೩ರಂದು ಯೂರೋಪಿನಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಪರ ಅಭಿಯಾನ.
ಇಂಗ್ಲೆಂಡ್, ಆಸ್ಟ್ರಿಯಾ, ಇಟೆಲಿ ವಿಯೆನ್ನಾಗಳ ಭೇಟಿ, ತ್ವರಿತಗತಿಯ ಪ್ರವಾಸ, ಮಿಂಚಿನ ಓಡಾಟ. ಸ್ವಿಟ್ಜರ್ಲೆಂಡ್, ಚೆಕೋಸ್ಲೋವಾಕಿಯಾ, ಪೋಲೆಂಡ್, ಜರ್ಮನಿಗಳಲ್ಲಿ ಭಾರತದ ಪರ ಪ್ರಚಾರ. ಇಟೆಲಿ ಪ್ರಧಾನಿ ಬೆನಿತೋ ಮುಸ್ಸೋಲಿನಿ ಜತೆ ಚರ್ಚೆ. ೧೯೩೬ ಏಪ್ರಿಲ್ ೮ರಂದು ಮರಳಿ ಭಾರತಕ್ಕೆ, ಬಂದರಲ್ಲೇ ಬಂಧನ. ೧೯೩೭ರಲ್ಲಿ ಮತ್ತೆ ಆಸ್ಟ್ರಿಯಾ ಪಯಣ.
●ರಾಜಕೀಯ ಅನುಭವ-ಒಳನೋಟ
ಕಾಂಗ್ರೆಸ್‌ನ ಅಖಿಲಭಾರತ ಅಧಿವೇಶನದ ಅಧ್ಯಕ್ಷತೆ ೧೯೩೮ರ ಫೆಬ್ರವರಿ ೧೯ರಂದು, ಹರಿಪುರದಲ್ಲಿ. ವಿದೇಶೀ ನೆಲಗಳ ಓಡಾಟದಿಂದ ಪಡೆದ ರಾಜಕೀಯ ಅನುಭವ-ಒಳನೋಟಗಳಿಂದ ಬ್ರಿಟಿಷರ ಒಡೆದು ಆಳುವನೀತಿ ಕುರಿತ ಕ್ಷಾತ್ರತೇಜದ ಐತಿಹಾಸಿಕ ಭಾಷಣ, ದೇಶ ವಿಭಜನೆಯ ಬ್ರಿಟಿಷರ ತಂತ್ರದ ಸೂಚನೆ. ಮುಂದಿನ ೯ ವರ್ಷದಲ್ಲೇ ಸತ್ಯವಾದ ಬೋಸ್ ಭವಿಷ್ಯವಾಣಿ! ಆರೆಸ್ಸೆಸ್‌ನ ’ಸಂಘ ಶಿಕ್ಷಾವರ್ಗ’ ಶಿಬಿರಕ್ಕೆ ೧೯೩೮ರಲ್ಲಿ ಭೇಟಿಗೆ ಒಪ್ಪಿಗೆ, ಸಂಘದ ಧ್ಯೇಯ – ಅನುಶಾಸನ ಕಾರ‍್ಯಪದ್ಧತಿ ಕುರಿತ ಶ್ಲಾಘನೆ.
ಆದರೆ ಕಾರಣಾಂತರಗಳಿಂದ ಭೇಟಿ ಸಾಧ್ಯವಾಗಲಿಲ್ಲ.ಕಾಂಗ್ರೆಸ್ ಅಧ್ಯಕ್ಷಗಾದಿಗೆ ನಡೆದ ಮೊತ್ತಮೊದಲ ಚುನಾವಣೆಯಲ್ಲಿ ಡಾ|| ಪಟ್ಟಾಭಿ ಸೀತಾರಾಮಯ್ಯರ ವಿರುದ್ಧ ೨೧೫ ಮತಗಳ ಗೆಲುವು! ಸುಭಾಷ್ ವಿರುದ್ಧ ಹಲವಾರು ಟೀಕೆಗಳು, ಅನಗತ್ಯ ಋಣಾತ್ಮಕ ಮಾತುಗಳು ಗಾಂಧೀಜಿಯಿಂದ. ಸ್ವಾತಂತ್ರ್ಯದ ಮೋಡಗಳು ಸಮೀಪ ಇರುವಂತೆಯೇ ಬ್ರಿಟಿಷ್ ಸರ್ಕಾರದ ಜತೆ ದುರ್ಬಲ ಕಾಂಗ್ರೆಸ್‌ನ ತಾರ್ಕಿಕ ನಡೆಗಳಿಂದ ಬೇಸತ್ತು ಕಾಂಗ್ರೆಸ್‌ಗೆ ರಾಜೀನಾಮೆ.
’ಫಾರ್‌ವರ್ಡ್ ಬ್ಲಾಕ್’ ಸ್ಥಾಪನೆ.೧೯೪೦, ಜೂನ್ ೧೮ರಂದು ಡಾ|| ಹೆಡಗೇವಾರ್ ಜತೆ ಭೇಟಿ ಆದರೆ ತೀವ್ರ ಜ್ವರದಿಂದ ಹಾಸಿಗೆ ಹಿಡಿದಿದ್ದ ಡಾ|| ಹೆಡಗೇವಾರ್ ಜತೆ ಸಾಧ್ಯವಾಗದ ಮಾತುಕತೆ. ಮೂರೇದಿನದಲ್ಲಿ ಡಾ|| ಹೆಡಗೇವಾರ್ ನಿಧನ. ಕೈ ತಪ್ಪಿದ ಮಹಾಮಿಲನ. ನಂತರ ವೀರ ಸಾವರ್ಕರ್ ಭೇಟಿ.ಬೋಸ್ ಕಾಣೆಯಾಗಿದ್ದಾರೆ’ ಎಂಬ ಸುದ್ದಿ ೧೯೪೧ ಜನವರಿ ೨೬ಕ್ಕೆ!
ಕಾಬೂಲ್ ಮೂಲಕ ಬರ್ಲಿನ್ ಸೇರಿದ ಬೋಸ್‌ರಿಂದ ಸೈನಿಕ ಕಾರ‍್ಯಾಚರಣೆ. ’ಫ್ರೀ ಇಂಡಿಯಾ ಸೆಂಟರ್’ ೧೯೪೧, ನವೆಂಬರ್ ೨ಕ್ಕೆ ಉದ್ಘಾಟನೆ, ’ಆಜಾದ್ ಹಿಂದ್’ ಲಾಂಛನ, ’ಜೈಹಿಂದ್’ ಘೋಷಣೆ, ಬೋಸರಿಗೆ ’ನೇತಾಜಿ’ ಬಿರುದು. ಜರ್ಮನ್ ಸೇನಾಕೇಂದ್ರಗಳಿಗೆ ಸೈನಿಕ ತರಬೇತಿ, ಬರ್ಲಿನ್ ರೇಡಿಯೋದಲ್ಲಿ ಆಗಾಗ ಭಾಷಣ, ಹಿಟ್ಲರ್ ಜತೆ ಭೇಟಿ. ಜಪಾನ್‌ಗೆ ತೆರಳಿ ಅಲ್ಲಿಂದ ಪೂರ್ವಾಂಚಲ ಭಾರತದ ಗಡಿಗಳಲ್ಲಿ ಸೈನ್ಯ ಸಜ್ಜು ಮಾಡಲು ಇಂಡಿಯನ್ ಇಂಡಿಪೆಂಡೆನ್ಸ್ ಲೀಗ್ ಮೂಲಕ ಅವಿರತ ಚಟುವಟಿಗೆ.
●ಆಜಾದ್ ಹಿಂದ್ ಸೇನೆ.
ಬಲಿಷ್ಠಗೊಂಡ ಆಜಾದ್ ಹಿಂದ್ ಸೇನೆಗೆ ದೌಡಾಯಿಸುತ್ತಿದ್ದ ನಿವೃತ್ತಯುದ್ಧ ಕೈದಿಗಳು. ಮುಂದಿನ ದಿನಗಳಲ್ಲಿ ಪಕ್ವ ಸೈನ್ಯವಾಗಿ ರೂಪುಗೊಂಡ ಇಂಡಿಯನ್ ನ್ಯಾಷನಲ್ ಆರ್ಮಿ (ಐ.ಎನ್.ಎ).
ಪಾದರಸದಂತೆ ಪೂರ್ವ ಏಷ್ಯಾ ರಾಷ್ಟ್ರಗಳಲ್ಲಿ ಓಡಾಡಿ ಸ್ವರಾಜ್ಯ ಹೋರಾಟಕ್ಕೆ ಅಗಾಧ ಬೆಂಬಲ ಪಡೆದ ಬೋಸ್‌ರಿಂದ ಆರ್ಜೀ-ಹುಕುಮಂತ್-ಎ-ಆಜಾದ್ ಹಿಂದ್ (ಸ್ವತಂತ್ರ ಭಾರತದ ಹಂಗಾಮಿ ಸರ್ಕಾರ) ಸ್ಥಾಪನೆ; ಐಎನ್‌ಎಯ ಕಮಾಂಡರ್ ಇನ್ ಚೀಫ್ ಆಗಿ ಬೋಸ್. ೧೯೪೫ರ ಆಗಸ್ಟ್ ೧೮ರಂದು ದಕ್ಷಿಣ ವಿಯೆಟ್ನಾಂನ ಸೈಗಾನ್‌ನಿಂದ ವಿಮಾನಹತ್ತಿದ ಸುಭಾಷ್, ವಿಮಾನ ಸ್ಫೋಟದಿಂದಾಗಿ ನಿಧನ.
ಆ ಕುರಿತು ಸ್ಪಷ್ಟಗೊಳ್ಳದ ಅನೇಕ ವಿವಾದಗಳು ಇಂದಿಗೂ ಇದೆ. ಅನ್ವೇಷಣಾ ಸಮಿತಿ ನೇಮಿಸಿದರೂ, ಸಾವನ್ನೊಪ್ಪದ ಅನೇಕಮಂದಿ ಬಹಳವರ್ಷ ನೇತಾಜಿ ಬದುಕಿದ್ದಾರೆಂದೇ, ತಿಳಿದಿದ್ದರು. ಬೋಸರು ಆಗಾಗ ಹೇಳುತ್ತಿದ್ದರು “ನೀವು ನಿಮ್ಮ ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯ ತಂದು ಕೊಡುತ್ತೇನೆ. ಸ್ವಾತಂತ್ರ್ಯವೆಂಬುದು ಯಾರೂಕೊಡುವಂಥ ಸರಕಲ್ಲ ಅದು ನಾವು ಪಡೆದುಕೊಳ್ಳಬೇಕಾದದ್ದು”
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ ಅಧ್ಯಕ್ಷರಾಗಿ ಸತತ ಎರಡು ಬಾರಿ ಕಾರ್ಯ ನಿರ್ವಹಿಸದ ಇವರು, ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ತತ್ವಗಳನ್ನು ಒಪ್ಪದೆ ಪಕ್ಷದಿಂದ ಹೊರಬಂದರು. ಮುಂದೆ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ನೇತಾಜಿಯವರು ಭಾರತೀಯ ರಾಷ್ಟ್ರೀಯ ಸೇನೆಯನ್ನು ಅನುಸ್ಥಾಪಿಸಿದರು. ಇವರು ಟೈವಾನ್‍ನಲ್ಲಿ ೧೯೪೫ರ ಆಗಸ್ಟ್ ೧೮ರಂದು ವಿಮಾನ ಅಪಘಾತದಲ್ಲಿ ಮರಣ ಹೊಂದಿದರು ಎಂದು ಭಾವಿಸಲಾಗಿದೆ. ಆದರೆ ಈ ಘಟನೆ ವಿವಾದಿತವಾಗಿದೆ.
***
ಆರಾಧನೆ: ಪ್ರೋ.ಕೆ. ಖಂಡೋಬ
ಫೆಬ್ರವರಿ 15, 2018 ಮಹಾ ಸಂತ ಶ್ರೀ ಸೇವಾಲಾಲರ 279ನೇ ಜಯಂತಿ. ಕರ್ನಾಟಕ ಸರಕಾರ ಈ ಮಹಾಸಂತನ ಜಯಂತಿಯನ್ನು ಕರ್ನಾಟಕದಾದ್ಯಂತ ಮೊಟ್ಟಮೊದಲ ಬಾರಿಗೆ ಸರಕಾರದ ವತಿಯಿಂದ ಆಚರಿಸುತ್ತಿದ್ದು, ತನ್ನಿಮಿತ್ತ ಈ ಲೇಖನ, ಲೋಕಕಲ್ಯಾಣಕ್ಕಾಗಿ ಈ ಭರತ ಭೂಮಿಯಲ್ಲಿ ಹಲವು ಜನ ಸಾಧು-ಸಂತರು, ಸತ್ಪುರುಷರು, ಮೇಧಾವಿಗಳು, ದಾರ್ಶನಿಕರು, ಬುದ್ಧಿಜೀವಿಗಳು ಮತ್ತು ತ್ಯಾಗಿಗಳು ಅವತರಿಸಿದ್ದಾರೆ. ಜನತೆಯಲ್ಲಿನ ಜಾತಿಪದ್ಧತಿ ಮತ್ತು ಧರ್ಮಾಂಧತೆಗಳನ್ನು ತೊಡೆದುಹಾಕಲು ಆಯಾ ಕಾಲಘಟ್ಟದಲ್ಲಿ ಹಲವು ಜನ ಸಾಂಸ್ಕೃತಿಕ ನಾಯಕರು, ಮೇಧಾವಿಗಳು ಹೋರಾಟ ಮಾಡಿದ್ದಾರೆ.
ಸೇವಾಲಾಲನ ಜನನ, ಮರಣ, ಜೀವನ, ಸಾಧನೆ, ಹೋರಾಟಗಳ ಹಿನ್ನೆಲೆಯಲ್ಲಿ ಲಂಬಾಣಿ ಮೌಖಿಕ ಪರಂಪರೆಯಲ್ಲಿ ಹಲವು ಐತಿಹ್ಯ ಕಥೆ ಪುರಾಣಗಳು ಹುಟ್ಟಿಕೊಂಡಿವೆ. ಇವುಗಳು ಸೇವಾಲಾಲನ ವಾಸ್ತವ ಸಂಗತಿಗಳಿಗಿಂತ ಹೆಚ್ಚಾಗಿ ಅವನನ್ನು ಒಬ್ಬ ಪೌರಾಣಿಕ ವ್ಯಕ್ತಿಯನ್ನಾಗಿ ಚಿತ್ರಿಸಿ ದೈವತ್ವಕ್ಕೆ ಏರಿಸಿವೆ. ವಾಸ್ತವವಾಗಿ ಸೇವಾಲಾಲ ತಮ್ಮ ಜೀವಿತ ಕಾಲಾವಧಿಯಲ್ಲಿ ತನ್ನನ್ನು ನಂಬಿದ ಒಂದು ಜನಾಂಗದ ತನ್ನದೆಲ್ಲವನ್ನೂ ಧಾರೆ ಎರೆದ ಒಬ್ಬ ಮಹಾಸಂತನೆಂಬುದು ಸತ್ಯ. ಲಂಬಾಣಿಗರಲ್ಲಿ ಸೇವಾಲಾಲ್ ಬಹುದೊಡ್ಡ ಸಾಧುಪುರುಷ. ಬಾಲಬ್ರಹ್ಮಚಾರಿಯಾಗಿ ತಪಸ್ಸು, ಧ್ಯಾನ ಮತ್ತು ಭಕ್ತಿ ಮೂಲಕ ಅಧ್ಯಾತ್ಮವನ್ನು ಅಪ್ಪಿಕೊಂಡು, ತನ್ನ ಜನಾಂಗದ ಸೇವೆಯನ್ನು ಮಾಡಿದ ಮಹಾನ್ ಹಿತಚಿಂತಕ. ಅಧ್ಯಾತ್ಮದ ಮೂಲಕವಾಗಿ ಜನಾಂಗಕ್ಕೆ ಉಪದೇಶಗಳನ್ನು ನೀಡಿ, ಸನ್ಮಾರ್ಗದತ್ತ ಕೊಂಡೊಯ್ದ ಮಾರ್ಗದರ್ಶಕ. ಸೇವಾಲಾಲರ ಬೋಧನೆ ಮತ್ತು ಚಿಂತನೆಗಳು ಬಂಜಾರ ಜನಾಂಗದಲ್ಲಿ ಇಂದು ಐಕ್ಯತೆ ಯನ್ನುಂಟುಮಾಡಿರುವುದು ಸ್ಪಷ್ಟ.
ಇಂದು ಬಂಜಾರರು ಸಾಂಸ್ಕೃತಿಕ ನೆಲೆಯಲ್ಲಿ ತನ್ನ ಅಸ್ಮಿತೆಯನ್ನು ಗುರುತಿಸಿಕೊಳ್ಳಲು ಮಹಾನುಭಾವರ ಸತ್ಕಾರ್ಯಗಳೇ ಕಾರಣವಾಗಿವೆ. ಹೀಗಾಗಿ ಬಂಜಾರ ಸಮುದಾಯದಲ್ಲಿ ಸೇವಾಲಾಲರು ವೀರನಾಗಿ, ವಿರಾಗಿಯಾಗಿ, ಒಬ್ಬ ಶ್ರೇಷ್ಠ ದಾರ್ಶನಿಕನಾಗಿ ಮತ್ತು ಸಾಂಸ್ಕೃತಿಕ ನಾಯಕನಾಗಿ ಚಿರಸ್ಥಾಯಿಯಾಗಿದ್ದಾರೆ. ಸೇವಾಲಾಲರು ಹುಟ್ಟಿನಿಂದಲೇ ದೈವಾಂಶ ಸಂಭೂತ. ಆತನ ಚರಿತ್ರೆ, ಪವಾಡ, ಅವತಾರ, ಮೊದಲಾದವುಗಳನ್ನು ಲಂಬಾಣಿಗಳು ತಮ್ಮ ಭಜನೆಗಳಲ್ಲಿ ದಿನಗಟ್ಟಲೆ, ವಾರಗಟ್ಟಲೇ ಹಾಡುತ್ತಾರೆ. ಸೇವಾಲಾಲರ ಕಾಲ, ಜನನ, ವೃತ್ತಾಂತ, ಮರಣ ಮತ್ತು ಬದುಕಿನ ಬಗೆಗೆ ಈಗಾಗಲೇ ಸಾಕಷ್ಟು ಚರ್ಚೆ ನಡೆದಿದೆ. ಚಾರಿತ್ರಿಕ ಆಧಾರಗಳು ಇಲ್ಲದ್ದರಿಂದ ಯಾವುದೇ ಖಚಿತವಾದ ಮಾಹಿತಿಗಳು ದೊರೆಯುವುದಿಲ್ಲ. ಅವರ ಕಥನ ಗೀತೆಗಳು, ಲಾವಣಿಗಳು, ಭಜನೆ-ಗೀತೆ ಹಾಗೂ ಕೆಲವು ಭೌಗೋಳಿಕ ಆಧಾರಗಳನ್ನು ಆಧರಿಸಿ ಇದೀಗ ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಸೂರಗೊಂಡನಕೊಪ್ಪವೇ ಸೇವಾಲಾಲರ ಜನ್ಮಸ್ಥಳವೆಂದು ನಿರ್ಧರಿಸಲಾಗಿದೆ. ಈ ಪ್ರದೇಶದಲ್ಲಿ ಇಂದಿಗೂ ಕಂಡುಬರುವ ಝುಮ್ರಿ ಝೋಲ್, ಭೂರಿಪಟಾರ್, ಚಂದನಖೋಳಿ, ಕಾಳೋಕೂಂಡೋ, ಕಿಂಚೇರ್ ಗುಂಡಿ, ಬನದವ್ವನ ಗುಡಿ ಮತ್ತು ಗೊಲ್ಲನಮಟ್ಟಿ ಮೊದಲಾದ ಸ್ಥಳಗಳು ಅವರ ಲಾವಣಿಗಳಲ್ಲಿ ಸ್ಪಷ್ಟವಾಗಿ ದಾಖಲಾಗಿರುವುದರಿಂದ ಸೂರಗೊಂಡನಕೊಪ್ಪ ಪ್ರದೇಶವೇ ಸೇವಾಲಾಲರ ಜನ್ಮಸ್ಥಳ ಆಗಿರುವುದರಲ್ಲಿ ಯಾವ ಸಂದೇಹಗಳು ಇರಲಾರವು.
ಭೀಮಾ ನಾಯಕ ಹಾಗೂ ಧರ್ಮಿಣಿ ಬಾಯಿಗೆ ಮದುವೆ ಮಾಡುತ್ತಾರೆ. ಮದುವೆಯಾಗಿ 12 ವರ್ಷ ಕಳೆದರೂ ಸಂತಾನ ಪ್ರಾಪ್ತಿಯಾಗುವುದಿಲ್ಲ. ಈ ದಂಪತಿಗಳಿಬ್ಬರೂ ಜಗನ್ಮಾತೆಯ ಭಕ್ತಿಸೇವೆಯಲ್ಲಿ ಸುಖ-ಸಂತೋಷದಿಂದ ಬದುಕು ಸಾಗಿಸುತ್ತಿದ್ದರು. ಸಂತಾನ ಪ್ರಾಪ್ತಿಗಾಗಿ ಕಂಡ ಕಂಡ ದೇವರು-ದೇವತೆಗಳಿಗೆ ಮೊರೆ ಹೋದರೂ ಪ್ರಯೋಜನವಾಗಲಿಲ್ಲ. ಕೊನೆಗೆ, ಜಗದಂಬೆಯನ್ನೇ ನಂಬಿಕೊಂಡು ಅವಳ ಭಕ್ತಿಯಲ್ಲಿ ಕಾಲ ಕಳೆಯುತ್ತಾ, ಸಂತಾನ ಪ್ರಾಪ್ತಿಗಾಗಿ ಸಂಕಲ್ಪವನ್ನು ಮಾಡಿ ಭೀಮಾ ನಾಯಕರು ಘೋರವಾದ ತಪಸ್ಸನ್ನು ಕೈಗೊಳ್ಳುತ್ತಾನೆ. ಕೊನೆಗೆ ಶಿವ-ಪಾರ್ವತಿಯ ಕರುಣೆಯಿಂದ ಸಂತಾನ ಭಾಗ್ಯವನ್ನು ಈ ನಡುವೆ ತಮಗೆ ಮಗುವಾದರೆ ಭಕ್ತಿಯ ಹೆಸರಲ್ಲಿ ನಿನಗೆ ಒಪ್ಪಿಸುತ್ತೇವೆ ಎಂದು ಮರಿಯಮ್ಮನಲ್ಲಿ ಹರಕೆ ಹೊತ್ತಿರುತ್ತಾರೆ. ಹೀಗೆ ಹುಟ್ಟಿದ ಮಗು ಸಾಮಾನ್ಯ ಮಗುವಾಗಿರಲಿಲ್ಲ. ಅವನೊಬ್ಬ ಸತ್ಪುರುಷನಾಗಿದ್ದ. ಮಾಣಿಕ್ಯದಂತಹ ಮಗುವಿಗೆ ಸಾಕ್ಷಾತ್ ಮಾತೆ ಜಗದಂಬೆಯೇ ಮಾರುವೇಷದಲ್ಲಿ ಬಂದು, ಸೇವಾಭಾಯಾ, ಸೇವಾಲಾಲ ಎಂದು ನಾಮಕರಣ ಮಾಡುತ್ತಾಳೆ.
ಆ ಮಗು ಶಿವನ ಅವತಾರಿಯಾಗಿದ್ದು, ದೇವಿಯ ಭಕ್ತನಾಗಿದ್ದಾನೆ. ಆತನು ಬಂಜಾರ ಕುಲದ ವಂಶೋದ್ಧಾರಕನಾಗಿದ್ದು, ದುಷ್ಟರನ್ನು ಸಂಹರಿಸಿ, ಶಿಷ್ಟರ ರಕ್ಷಣೆ ಮಾಡುವನೆಂದು ಜಗದಂಬೆ ಹೇಳಿ, ಅಲ್ಲಿಂದ ಕಾಲಚಕ್ರ ಗತಿಸಿ ಸೇವಾಲಾಲನಿಗೆ 12 ವರ್ಷ ತುಂಬಿದಾಗ ಮರಿಯಮ್ಮ ತನ್ನ ಷರತ್ತನ್ನು ಈಡೇರಿಸಬೇಕೆಂದು ಧರ್ಮಿಣಿ ಬಾಯಿಯ ಕನಸಿನಲ್ಲಿ ಬಂದು ಸೇವಾಲಾಲನನ್ನು ತನ್ನ ಸೇವೆಗೆ ಬಿಡಬೇಕೆಂದು ಒತ್ತಾಯಿಸುತ್ತಾಳೆ. ಅದಕ್ಕೆ ಧರ್ಮಿಣಿಯು ಒಪ್ಪದೇ ಹೋದಾಗ ನೇರವಾಗಿ ಸೇವಾಲಾಲನನ್ನು ತನ್ನ ಭಕ್ತನಾಗಬೇಕೆಂದು, ತನ್ನ ಜತೆಗೆ ಬರಬೇಕೆಂದು ಕೇಳಿದಾಗ ಅವನೂ ಭಕ್ತನಾಗಲು ತಿರಸ್ಕರಿಸುತ್ತಾನೆ. ತಾನು ಪರಮಾತ್ಮನ ಸೇವಕನೆಂದು, ಮರಿಯಮ್ಮಳ ಸೇವೆ ಮಾಡಲಾರನೆಂದು ಹಠ ಹಿಡಿಯುತ್ತಾನೆ. ಇದರಿಂದ ಅವಮಾನಿತಳಾದ ಮರಿಯಮ್ಮ ಸೇವಾಲಾಲನ ಕುಟುಂಬದ ಸರ್ವಸ್ವವನ್ನು ನಾಶ ಮೂಲಕ ಪರಿಪರಿಯಾಗಿ ಕಾಡಿಸುತ್ತಾಳೆ. ಇದರಿಂದ ಹತಾಶನಾದ ಸೇವಾಭಾಯಾ ಅನಿವಾರ್ಯವಾಗಿ ಜಗನ್ಮಾತೆಯ ಭಕ್ತನಾಗಲು ಒಪ್ಪಿಕೊಳ್ಳುತ್ತಾನೆ.
ಕಾಲಗತಿಯಲ್ಲಿ ಹತ್ತಾರು ವರ್ಷಗಳವರೆಗೆ ಮರಿಯಮ್ಮನ ಸೇವೆಗೆ ತೊಡಗಿಸಿಕೊಂಡ ಸೇವಾಲಾಲರು ಮುಂದೆ ಸಮುದಾಯದಲ್ಲಿ ಜಗನ್ಮಾತೆಗಿಂತ ಹೆಚ್ಚಿನ ಜನಪ್ರಿಯತೆಯನ್ನು ಪಡೆಯುತ್ತಾನೆ. ಜನರು ಮರಿಯಮ್ಮನನ್ನು ಮರೆತು ಸೇವಾಲಾಲನನ್ನೇ ಪೂಜಿಸುವಂತೆ ಮಹಾನ್ ಸಾಧಕನಾಗಿ ಮೆರೆಯುತ್ತಾನೆ. ತನ್ನ ಜನಸಮುದಾಯದ ಏಳಿಗೆಗಾಗಿ ಶ್ರಮಿಸಿ, ಅವರ ಬದುಕನ್ನು ಹಸನುಗೊಳಿಸಲು ನಿರಂತರವಾಗಿ ಹೋರಾಡುತ್ತಾನೆ. ಮರಿಯಮ್ಮಳಿಂದ ಮೊದಲೇ ವರವನ್ನು ಪಡೆದುಕೊಂಡಿದ್ದ ಸೇವಾಲಾಲ ತನ್ನ ಭಕ್ತರು ಕೇಳಿದ ವರಗಳ ತಕ್ಷಣವೇ ಈಡೇರಿಸಿ ಪ್ರಖ್ಯಾತಿಯನ್ನು ಪಡೆದುಕೊಂಡನು. ಈತನ ಜನಪ್ರಿಯತೆಯನ್ನು ಕಂಡು ಮರಿಯಮ್ಮ ಸಹಿಸಲಾರದೇ ಅವನು ಬ್ರಹ್ಮಚಾರಿಯಾಗಿರುವುದರಿಂದಲೇ ಇಷ್ಟೊಂದು ಪ್ರಭಾವಶಾಲಿಯಾಗಿರವನೆಂದು ಬಗೆದು, ಅವನಿಗೆ ಮದುವೆ ಮಾಡಿಸುವ ಮೂಲಕ ಆತನ ಜನಪ್ರಿಯತೆಯನ್ನು ಕುಗ್ಗಿಸಬೇಕೆಂದು ನಿರ್ಧರಿಸುತ್ತಾಳೆ. ಅಂತೆಯೇ, ಸೇವಾನ ಬಳಿಗೆ ಬಂದು ಮದುವೆಯಾಗುವಂತೆ ಅವನನ್ನು ಒತ್ತಾಯಿಸುತ್ತಾಳೆ. ಅದಕ್ಕೆ ಒಪ್ಪಿಕೊಳ್ಳದ ಸೇವಾಲಾಲ ತಾನು ಸಮಸ್ತ ಸಮುದಾಯದವರಿಗೆ ‘‘ಭಾಯಾ’’ (ಸಹೋದರ) ಆಗಿರುವುದರಿಂದ ನಾನು ಯಾರೊಂದಿಗೆ ಮದುವೆಯಾಗಲೆಂದು ವಾದಿಸುತ್ತಾನೆ.
ಎಲ್ಲಾ ನಾರಿಯರು ನನಗೆ ಸಹೋದರಿಯರು ಆಗಿರುವುದರಿಂದ ಈ ಮದುವೆ ಅಲ್ಲಗಳೆಯುತ್ತಾನೆ. ಆಧ್ಯಾತ್ಮ ಜೀವಿಯಾಗಿ ಸಾಧಕನಾಗಿದ್ದ ಸೇವಾಭಾಯಾ ಮರಿಯಮ್ಮನ ಮಾತನ್ನು ತಿರಸ್ಕರಿಸುತ್ತಾನೆ. ಮರಿಯಮ್ಮ ಅವಮಾನಿತಳಾಗಿ ಮತ್ತೆ ಮತ್ತೆ ಒತ್ತಾಯಿಸಿದಾಗ, ಬ್ರಹ್ಮನು ತನ್ನ ಹಣೆಬರಹದಲ್ಲಿ ಮದುವೆಯಾಗುವುದನ್ನು ಬರೆದಿಲ್ಲವಾದ್ದರಿಂದ ಮದುವೆಯಾಗುವುದಾದರೂ ಹೇಗೆ ? ಎಂದು ಪ್ರಶ್ನಿಸುತ್ತಾನೆ. ಹಾಗಾದರೆ, ನಿನ್ನ ಹಣೆಯ ಬರಹವನ್ನು ಪರೀಕ್ಷಿಸಲು ದೇವಲೋಕಕ್ಕೆ ಹೋಗೋಣವೆಂದು ಅವನನ್ನು ಕರೆಯುತ್ತಾಳೆ. ಅದಕ್ಕೆ ಸಮ್ಮತಿಸಿದ ಸೇವಾಭಾಯಾ ಮರಿಯಮ್ಮನೊಂದಿಗೆ ದೇವಲೋಕಕ್ಕೆ ಹೋಗಲು ಅಣಿಯಾಗುತ್ತಾನೆ. ಸೇವಾ ಭಾಯಾ ತಾನು ಸ್ವರ್ಗಲೋಕಕ್ಕೆ ತನ್ನ ಹಣೆಯ ಬರಹವನ್ನು ಕೇಳಲು ಬ್ರಹ್ಮನಲ್ಲಿಗೆ ಹೋಗುವ ಪ್ರಸ್ತಾಪಿಸಿ, ತನ್ನ ಶರೀರವನ್ನು ದೇವಸ್ಥಾನದಲ್ಲಿಟ್ಟು, ಬೇವಿನ ಸೊಪ್ಪಿನಲ್ಲಿ ಮುಚ್ಚಿಡಬೇಕೆಂದು, ತಾನು ಹಿಂದಿರುಗಿ ಬರುವವರೆಗೆ ನಿರಂತರವಾಗಿ ಭಜನೆ ಮಾಡುತ್ತಿರಬೇಕೆಂದು, ಬೇವಿನ ಸೊಪ್ಪಿನಲ್ಲಿರುವ ನನ್ನ ಶರೀರವನ್ನು ಅಪ್ಪಿ-ತಪ್ಪಿಯೂ ಯಾರೂ ಮುಟ್ಟಬಾರದೆಂದು ತನ್ನ ಬಂಧು-ಬಾಂಧವರಿಗೆಲ್ಲಾ ತಿಳಿಸಿ, ಸ್ವರ್ಗಕ್ಕೆ ಹೊರಡುತ್ತಾನೆ.
ಅವನು ಹೇಳಿ ಹೋದಂತೆ ಸಮುದಾಯದವರೆಲ್ಲಾ ಕಟ್ಟುನಿಟ್ಟಾಗಿ ನಡೆದುಕೊಳ್ಳುತ್ತಾರೆ. ಸ್ವರ್ಗದಲ್ಲಿ ಪರಮಾತ್ಮನ ಸಮಕ್ಷಮದಲ್ಲಿ ಮರಿಯಮ್ಮ ಮತ್ತು ಸೇವಾಲಾಲ ತಮ್ಮ ವಾದಗಳನ್ನು ಮಂಡಿಸುತ್ತಾರೆ. ಕೊನೆಗೆ ಸೇವಾಲಾಲನ ಹಣೆಯ ಬರಹವನ್ನು ಪರೀಕ್ಷಿಸಿದ ಪರಮಾತ್ಮನು ಅವನಿಗೆ ಮದುವೆ ಎಂಬುದೇ ಸ್ಪಷ್ಟಪಡಿಸುತ್ತಾನೆ. ಇದರಿಂದ ಇನ್ನಷ್ಟು ಅವಮಾನಿತಳಾದ ಮರಿಯಮ್ಮ ಇನ್ನು ತನಗೆ ಉಳಿಗಾಲ ಇಲ್ಲವೆಂದು, ಲಂಬಾಣಿ ಸಮುದಾಯದಲ್ಲಿ ತನ್ನ ಅಸ್ತಿತ್ವವೇ ಇಲ್ಲದಂತಾಗುವುದೆಂದು ಯೋಚಿಸಿ ಸೇವಾನಿಗಿಂತ ಮೊದಲೇ ಭೂಲೋಕಕ್ಕೆ ಇಳಿದು ಬಂದು ಮಾರುವೇಷದಲ್ಲಿ ನೇರವಾಗಿ ತಾಯಿ ಧರ್ಮಿಣಿ ಬಾಯಿ ಬಳಿಗೆ ಹೋಗುತ್ತಾಳೆ. ‘‘ನಿನ್ನ ಮಗ ಸೇವಾಲಾಲ ದೇವಸ್ಥಾನದಲ್ಲಿ ಸತ್ತು ಬಿದ್ದಿದ್ದು, ನೀನು ಇಲ್ಲಿ ನಿಶ್ಚಿಂತವಾಗಿ ಕಸೂತಿ ಹಾಕುತ್ತಿದ್ದೀಯ ?’’ ಎಂದು ಅವಳಿಗೆ ಹೇಳುತ್ತಲೇ ದು:ಖಿತಳಾದ ಧರ್ಮಿಣಿ ಬಾಯಿ ಎದ್ದು-ಬಿದ್ದು ದೇವಸ್ಥಾನಕ್ಕೆ ಬಂದು ಯಾರು ತಡೆದರೂ ಕೇಳದೇ ಮಗನ ದೇಹದ ಮೇಲೆ ರಪ್ಪನೇ ಬಿದ್ದು ಗೋಳಿಡುತ್ತಾಳೆ.
ಸೇವಾ ಭಾಯಾ ಭೂಲೋಕಕ್ಕೆ ಕಾಲಿಡುವಷ್ಟರಲ್ಲಿ ಆತನ ದೇಹಕ್ಕೆ ಮನುಷ್ಯರ ಸ್ಪರ್ಶವಾಗುತ್ತಿದ್ದಂತೆಯೇ ಆತನ ಆತ್ಮವು ಮರಳಿ ದೇಹವನ್ನು ಸೇರದೇ ಹಿಂದಿರುಗಿ ಸ್ವರ್ಗಕ್ಕೆ ಹೋಗಿಬಿಡುತ್ತದೆ. ಹೀಗೆ ಅಮರನಾದ ಸೇವಾಲಾಲರ ದೇಹಾಂತ್ಯವಾದ ಮೇಲೆ ಮಹಾರಾಷ್ಟ್ರದ ವಾಸಿಮ್ ಜಿಲ್ಲೆಯ ಅಕ್ಕೋಲ ತಾಲ್ಲೂಕಿನ ಸಮೀಪದಲ್ಲಿರುವ ಪೊಹರಾಗಢ ಎಂಬಲ್ಲಿ ಅಂತ್ಯಸಂಸ್ಕಾರ ನಡೆಯಿತು. ಈಗ ಅಲ್ಲಿ ಸೇವಾಲಾಲ್ ಮತ್ತು ಜಗನ್ಮಾತೆ ಮರಿಯಮ್ಮಳ ಬೃಹತ್ ಮಂದಿರಗಳನ್ನು ಕಟ್ಟಿದ್ದು, ಅದು ಬಂಜಾರರ ಪುಣ್ಯಕ್ಷೇತ್ರವಾಗಿದೆ. ಭಾರತದಾದ್ಯಂತ ನೆಲೆಯಾಗಿರುವ ಅಸಂಖ್ಯಾತ ಬಂಜಾರರು ಈ ತೀರ್ಥಕ್ಷೇತ್ರಕ್ಕೆ ಸಾಗರೋಪಾದಿಯಲ್ಲಿ ಬಂದು ದೇವರ ದರ್ಶನ ಪಡೆದು ಪಾವನರಾಗುತ್ತಾರೆ. ಸೇವಾಲಾಲರ ಜನ್ಮಭೂಮಿ ಕರ್ನಾಟಕದ ಸೂರಗೊಂಡ ನಕೊಪ್ಪದಲ್ಲಿ ಇಂದು ಕರ್ನಾಟಕ ಸರಕಾರದ ಸುಪರ್ದಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಜರುಗಿ, ವಿಸ್ತಾರವಾದ ತೀರ್ಥಕ್ಷೇತ್ರವಾಗಿ ಪರಿಣಮಿಸಿದೆ. ಸರಕಾರ ಈಚೆಗೆ ಮತ್ತೆ 13 ಎಕರೆ ಜಮೀನನ್ನು ನೀಡಿ, ಬೃಹತ್ ಪ್ರಮಾಣದಲ್ಲಿ ಈ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಿದೆ.
ಪ್ರತಿ ವರ್ಷ ನಡೆಯುವ ಸಂತ ಸೇವಾಲಾಲನ ಜಯಂತಿಗಾಗಿ ಕರ್ನಾಟಕದ ಭಕ್ತಾದಿಗಳು ಶಬರಿಮಲೆಯ ಸ್ವಾಮಿಗಳಂತೆ ವ್ರತಾಧಾರಿಗಳಾಗಿ ಶ್ವೇತವಸ್ತ್ರಗಳನ್ನುಟ್ಟು, ಲಕ್ಷಾಂತರ ಸಂಖ್ಯೆಯಲ್ಲಿ ಸೇರಿ ವಿಜೃಂಭಣೆಯಿಂದ ಯಾತ್ರೆಯಲ್ಲಿ ಪಾಲ್ಗೊಂಡು ಪುನೀತರಾಗುತ್ತಿದ್ದಾರೆ. 2018ರ ಈ ಜಯಂತಿಯನ್ನು ಕರ್ನಾಟಕ ಸರಕಾರ ಅಧಿಕೃತವಾಗಿ ರಾಜ್ಯಾದ್ಯಂತ ಆಚರಿಸಲು ಮುಂದಾಗಿದ್ದು, ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ಸಾಗರೋಪಾದಿಯಲ್ಲಿ ಭಕ್ತರು ಸೇರುವ ನಿರೀಕ್ಷೆ ಇದೆ. ಸೇವಾಲಾಲರು ಯೋಗಿಯಾಗಿ, ಮಹಾಸಂತರಾಗಿ ಲೋಕಕಲ್ಯಾಣಕ್ಕಾಗಿ ದೇಶಾದ್ಯಂತ ಸಂಚರಿಸಿ, ಅವರ ಬದುಕನ್ನು ಪಾವನ ಮಾಡುತ್ತಾ, ಅವರ ಬಾಳಿಗೆ ಬೆಳಕನ್ನು ನೀಡುತ್ತಾ, ಬಡತನ, ಕಷ್ಟ-ಕಾರ್ಪಣ್ಯಗಳಿಂದ ಬಳಲುತ್ತಿದ್ದವರಿಗೆ ಸುಂದರವಾಗಿ, ಸುವಿಚಾರಗಳನ್ನು ಹೇಳುತ್ತಾ, ತಿದ್ದಿ-ತೀಡುತ್ತಾ ಕಲ್ಯಾಣ ಮಾಡಿದ್ದಾನೆ.
ಸಂತ ಸೇವಾಲಾಲ ಮಹಾರಾಜ ಜಯಂತಿಯ ಶುಭಾಶಯಗಳು.
Advertisements
REPORT THIS AD

ಅಂತರರಾಷ್ಟ್ರೀಯ ಓಝೋನ್ ದಿನಾಚರಣೆ

ವಿಶ್ವ ಓಝೋನ್ ದಿನಾಚರಣೆ
ಓಝೋನ್ ಪದರ ಸೂರ್ಯನಿಂದ ಹೊರಸೂಸುವ ನೇರಳಾತೀತ ವಿಕಿರಣಗಳನ್ನು ಹೀರಿಕೊಳ್ಳುವ ಭೂಮಿಯ ವಾಯುಮಂಡಲದಲ್ಲಿ ಒಂದು ಪ್ರದೇಶವಾಗಿರುತ್ತದೆ. ಇದು ವಾಯುಮಂಡಲದಲ್ಲಿ ಓಝೋನ್ O3 ನ ಅನಿಲದ ಅಧಿಕ ಸಾಂದ್ರತೆಯನ್ನು ಹೊಂದಿದೆ. ಭೂಮಿಯ ಮೇಲೆ ಸುಮಾರು ೧೦ ಕಿ.ಮೀ ನಿಂದ ೪೦ ಕಿ.ಮೀ.ರ ವರೆಗೆ ವ್ಯಾಪಿಸಲ್ಪಟ್ಟಿರುವ ಈ ಪ್ರದೇಶವು ಸೂರ್ಯನಿಂದ ಬಿಡುಗಡೆಯಾಗುವ ನೇರಳಾತೀತ ವಿಕಿರಣಗಳನ್ನು ಹೀರಿಕೊಂಡು ಭೂಮಿಗೆ ಅವುಗಳು ತಲಪುವುದನ್ನು ತಡೆಗಟ್ಟುತ್ತವೆ. ಓಝೋನ್ ಪದರ ಹಾಗೂ ಅದಕ್ಕೆ ಆಗಿರುವ ಅನಾಹುತದ ಬಗ್ಗೆ ಜನರಲ್ಲಿ ಅರಿವಿಲ್ಲ. ಕೈಗಾರಿಕೋದ್ಯಮ, ಕಾರ್ಖಾನೆಗಳು ಹೆಚ್ಚುತ್ತಲೇ ಇವೆ. ಮತ್ತೊಂದೆಡೆ ಗೃಹೋಪಯೋಗಿ, ದಿನಬಳಕೆ ವಸ್ತುಗಳಲ್ಲಿ ಬಿಡುಗಡೆಯಾಗುವ ರಾಸಾಯನಿಕಗಳು ಮತ್ತು ಪ್ರಮುಖವಾಗಿ ರೆಫ್ರೀಜರೇಟರ್ ಮತ್ತು ಏರ್ ಕಂಡೀಶನರ್‍ಗಳಲ್ಲಿ ಉಪಯೋಗದಿಂದ ಬಿಡುಗಡೆಯಾಗುವ ಕ್ಲೋರೋ ಫ್ಲೋರೋ ಕಾರ್ಬನ್ ಅನಿಲ ಓಝೋನ್ ಪದರಕ್ಕೆ ರಂಧ್ರ ಉಂಟು ಮಾಡುತ್ತಿದೆ. ಭೂಮಿಯ ಓಝೋನ್‌ ಪದರವೂ ಸೂರ್ಯನಿಂದ ಬರುವ ಕಾಸ್ಮಿಕ್‌ ಕಿರಣಗಳನ್ನು ಶೋಧಿಸಿ, ವಾತಾವರಣವನ್ನು ಶುದ್ಧವಾಗಿರಿಸಿದೆ. ಆದರೆ ಹೆಚ್ಚಿನ ಪ್ರಮಾಣದ ಕಾರ್ಬನ್‌ ಡೈಆಕ್ಸೈಡ್‌ ಅನ್ನು ವಾತಾವರಣಕ್ಕೆ ಬಿಟ್ಟು ವಾಯುಮಂಡಲವನ್ನು ಮಲಿನಗೊಳಿಸುತ್ತಿದ್ದೇವೆ. ಸಕಲ ಜೀವರಾಶಿಗಳ ರಕ್ಷಾ ಕವಚ ಓಝೋನ್‌ ವಲಯ ಆಗಿದ್ದು, ಅದನ್ನು ಕಾಪಾಡಿಕೊಳ್ಳುವುದು ಮನುಷ್ಯನ ಆದ್ಯ ಕರ್ತವ್ಯವಾಗಿರುತ್ತದೆ. ಮನುಷ್ಯನ ಅಟ್ಟಹಾಸಕ್ಕೆ ಬಲಿಯಾದ ವಸ್ತು-ವಿಶೇಷಗಳ ಪಟ್ಟಿಯಲ್ಲಿ ಓಝೋನ್ ಪದರವು ಒಂದು. ಅದಿಲ್ಲದಿದ್ದರೆ ಭೂಮಿಯ ಜೀವಜಂತುಗಳು ಸೂರ್ಯನ ನೇರಳಾತೀತ ಕಿರಣಗಳ ನೇರ ಸ್ಪರ್ಶಕ್ಕೆ ಸಿಕ್ಕಿ ಕ್ಯಾನ್ಸರ್‌ನಂತಹ ಮಾರಕ ರೋಗಳಿಗೆ ಸಿಲುಕುತ್ತಿದ್ದವು ಎಂಬ ಆತಂಕವಿದೆ.
ಎ.ಪಿ.ಜೆ ಅಬ್ದುಲ್ ಕಲಾಂರು ಹೇಳಿದಂತೆ
“ಮನುಷ್ಯ ಎಲ್ಲಿದ್ದರೂ ಈ ಅನಂತ ವಿಶ್ವದ ಒಂದು ಅವಿಭಾಜ್ಯ ಅಂಗ.
ಹೀಗಾಗಿ ಕಷ್ಟ-ಸಂಕಷ್ಟ,
ಕೀಟ-ಕೋಟಲೆಗಳ ಭಯವೇಕೆ?
ಸಂಕಷ್ಟ ಬಂದರೆ
ಅದರ ಹಿನ್ನೆಲೆಯನ್ನು ಅರಿತುಕೊಳ್ಳಬೇಕು.” ಎಂಬ ಮಾತಿನಂತೆ
ಈ ಭೂಮಂಡಲದ ಸಕಲ ಜೀವಿಗಳ ರಕ್ಷಣೆ ಮಾಡುವ ಓಜೋನ್ ಎಂಬ ಕವಚ ವಾಯುಮಂಡಲದಲ್ಲಿದೆ. ಆ ಪದರವೀಗ ಅಪಾಯದ ಹಂತದಲ್ಲಿದೆ. ಓಜೋನ್ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂದು ವಿಶ್ವ ಓಜೋನ್ ದಿನವನ್ನು(ಸೆ.16) ಆಚರಿಸಲಾಗುತ್ತಿದೆ.
“If earth is our mother,
then Ozone is our father”
ಪ್ರಾಣಿಗಳು ಜೀವಿಸಲು ಮುಖ್ಯವಾದದ್ದು ಭೂಮಿ,
ಆದ್ದರಿಂದ ಭೂಮಿಯನ್ನು (ಭೂ)ತಾಯಿಗೆ ಹೊಲಿಸುತ್ತೇವೆ.
ಅದೇ ರೀತಿ ಓಝೋನ್ ಪದರು ಸಹ ಜೀವಿಸಲು ಅಷ್ಟೇ ಮುಖ್ಯ ಆದ್ದರಿಂದ ಅದನ್ನು ತಂದೆಗೆ ಹೋಲಿಸಿದರೆ ತಪ್ಪಾಗದು.
ಜೀವಿಗಳು ಬದುಕಿ ಬಾಳಲು ಭೂಮಿ ಬೇಕು, ಆದರೆ!!
ಭೂಮಿ ಬದುಕಲು
ಓಝೋನ್ ಬೇಕೇ-ಬೇಕು.
ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ,
ಓಝೋನ್ ಪದರು ನಮ್ಮನ್ನು ಸೂರ್ಯನಿಂದ ಬರುವ ನೇರಳಾತೀತ(UV-Rays) ಕಿರಣಗಳಿಂದ ರಕ್ಷಿಸುತ್ತದೆ.
ಇತಿಹಾಸ:
ರಾಸಾಯನಿಕ ಧಾತುವೊಂದರ ಭಿನ್ನರೂಪವಾಗಿ ಮೊಟ್ಟಮೊದಲಬಾರಿಗೆ ಗುರುತಿಸಲ್ಪಟ್ಟ ಓಝೋನ್‌,
ಒಂದು ಭಿನ್ನವಾದ ರಾಸಾಯನಿಕ ಸಂಯುಕ್ತವಾಗಿ ಕ್ರಿಸ್ಟಿಯನ್‌ ಫ್ರೆಡ್ರಿಕ್‌ ಸ್ಕಾನ್‌ಬೀನ್‌ ಎಂಬಾತನಿಂದ 1840ರಲ್ಲಿ ಸೂಚಿಸಲ್ಪಟ್ಟಿತು.
ಮಿಂಚಿನ ಬಿರುಗಾಳಿಗಳಲ್ಲಿನ ಒಂದು ವಿಲಕ್ಷಣವಾದ ವಾಸನೆಗೆ ಉಲ್ಲೇಖಿಸಲಾಗುವ ‘ಓಝೀನ್’‌
(ವಾಸನೆ ಬೀರುವುದು) ಎಂಬ ಗ್ರೀಕ್‌ ಕ್ರಿಯಾಪದದ ಹೆಸರನ್ನು ಅವನು ಓಝೋನ್‌ಗೆ ಇರಿಸಿದ.
ಓಝೋನ್‌ಗೆ ಸಂಬಂಧಿಸಿದ ಸೂತ್ರವಾದ O3 ಎಂಬುದು,
ಜಾಕ್ವೆಸ್‌-ಲೂಯಿಸ್‌ ಸೋರೆಟ್‌ ಎಂಬಾತನಿಂದ 1865ರಲ್ಲಿ ನಿರ್ಣಯಿಸಲ್ಪಡುವವರೆಗೆ ಮತ್ತು ಸ್ಕಾನ್‌ಬೀನ್‌ ಎಂಬಾತನಿಂದ 1867ರಲ್ಲಿ ದೃಢೀಕರಿಸಲ್ಪಡುವವರೆಗೆ ತೀರ್ಮಾನಿಸಲ್ಪಟ್ಟಿರಲಿಲ್ಲ.
1985ರಲ್ಲಿ ಓಝೋನ್ ಪದರದಲ್ಲಿ ರಂಧ್ರ ಹಾಗೂ ಪದರ ತೆಳುವಾಗಿರುವುದು ಕಂಡುಬಂದಿತು.ಇದರಿಂದುಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿತ ವಿವಿಧ ದೇಶಗಳ ಸಕಾ೯ರದ ಮುಖ್ಯಸ್ಥರು ಒಟ್ಟಾಗಿ ಸೇರಿ
1987ರ ಸೆ.16ರಲ್ಲಿ ವಿಯೆನ್ನಾದಲ್ಲಿ ಓಜೋನ್ ಪದರ ರಕ್ಷಣೆಗಾಗಿ ಅಂತಾರಾಷ್ಟ್ರೀಯ ಸಮಾವೇಶ ನಡೆಯಿತು.
ಓಜೋನ್ ಬಗ್ಗೆ ಜಾಗೃತಿ ಮೂಡಿಸುವ ನಿರ್ಣಯವನ್ನು ಅಲ್ಲಿ ಕೈಗೊಳ್ಳಲಾಯಿತು. ಈ ಸಂಬಂಧದ
“ಮಾಂಟ್ರೆಲ್ ಪ್ರೊಟೊಕಾಲ್‌”ಗೆ 24 ದೇಶಗಳು ಸಹಿ ಹಾಕಿದವು. ಈ ಮಹತ್ವದ ದಿನವನ್ನು ನೆನೆಯುವ ಮತ್ತು ಓಜೋನ್ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶ.
ಹಾಗೂ 1994 ಸೆಪ್ಟೆಂಬರ್ 16 ರಂದು ನಡೆದ ಅಮೇರಿಕಾ ಸಂಯುಕ್ತ ಸಂಸ್ಥಾನದ ಸಾಮಾನ್ಯ ಸಭೆಯಲ್ಲಿ ಓಝೋನ್ ಪದರದ ಸಂರಕ್ಷಣೆಗೆ ಸಂಬಂಧಿಸಿದ ಅಂತರರಾಷ್ಟ್ರೀಯ ದಿನ ಆಚರಿಸಲು ನಿರ್ಧರಿಸಿ,
1987ರ ಸೆಪ್ಟೆಂಬರ್ 16ರಂದು     ಮಾಂಟ್ರಿಯಲ್ ಪ್ರೋಟೊಕಾಲ್‌ಗೆ ಸಹಿಹಾಕಿರುವುದನ್ನು ನೆನಪಿಸಲು,
ಸೆಪ್ಟೆಂಬರ್ 16 ಅನ್ನು
“ವಿಶ್ವ ಓಝೋನ್ ದಿನ” ಆಚರಿಸಲು ತೀರ್ಮಾನಿಸಿತು.
ಇದರ ಉದ್ದೇಶ ಓಜೋನ್ ಪದರಿನ ಸವಕಳಿ ಹಾಗೂ ಜಾಗತಿಕ ತಾಪಮಾನ ಏರಿಕೆ ನಿಯಂತ್ರಣ, ಪರಿಸರ ಮತ್ತು ಮಾನವ ಜೀವನದ ಮೇಲೆ ಇದರ ಪಾತ್ರವನ್ನು ತಿಳಿಸುತ್ತದೆ.
“Ozone is like your Heart,
If broken,
then you are Finish.” ಎಂಬ ಮಾತಿನಂತೆ ಓಝೋನ್ ಪದರ
250 ರಿಂದ 305 ಡಾಬ್ಸನ್ ಯುನಿಟ್ಟಿಗೆ ನಷ್ಟು ದಪ್ಪ (ಗಟ್ಟಿ)  ಇರಬೇಕು. ಆದರೆ ಈ ಹಿಂದೆ ಓಝೋನ್ ಪದರದಲ್ಲಿ ರಂಧ್ರವಾಗಿದೆ, ಅದರ ಸಾಂದ್ರತೆ ಕಡಿಮೆಯಾಗಿದೆ ಎಂದು ತಿಳಿದಾಗ ಕೇವಲ 90 ಡಾಬ್ಸನ್ ನಷ್ಟಿತ್ತು.
2016 ಸಾಲಿನ ಘೋಷವಾಕ್ಯ(Theme):
“Ozone and climate: Restored by a world united”
ಅಂದರೆ ವಿಶ್ವವೇ ಒಗ್ಗೂಡಿ ಓಝೋನ್ ಪದರ ರಕ್ಷಿಸುವ ಮೂಲಕ ಜಾಗತಿಕ ತಾಪಮಾನ ಕಡಿಮೆಯಾಗಿಸುವುದು.
ಆಮ್ಲಜನಕದ ಮೂರು ಪರಮಾಣುಗಳು ಸೇರಿ ಓಝೋನ್ (03) ಆಗುತ್ತದೆ.
ವಾತಾವರಣದ ಮೇಲೆ ಭೂಮಿಯನ್ನು ಆವರಿಸಿರುವ ಓಝೋನ್ ಪದರವು ಅಪಾಯಕಾರಿಯಾದ ಸೂರ್ಯನಿಂದ ಬರುವ ಅತಿನೇರಳೆ ಕಿರಣವನ್ನು ಹೀರಿಕೊಳ್ಳುವುದರ ಮೂಲಕ ಜೀವಸಂಕುಲದ ಮೇಲಾಗುವ ದುಷ್ಪರಿಣಾಮಗಳನ್ನು ತಡೆಯುವಲ್ಲಿ ಓಝೋನ್ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ.
ಭೂಮಿಯ ಮೇಲೆ ಸುಮಾರು 15 ಕಿ.ಮೀ. ದಿಂದ 50 ಕಿ.ಮೀ ವ್ಯಾಪ್ತಿಯಲ್ಲಿ  ಓಝೋನ್ ಪದರು ಭೂಮಿಯನ್ನು ಆವರಿಸಿದೆ.
ಓಝೋನ್ ಪದರಿನ ಮುಖ್ಯವಾದ ಕಾರ್ಯವೆಂದರೆ ಸೂರ್ಯನಿಂದ ಬಂದ 97-98% ಅತಿನೇರಳೆ ಕಿರಣಗಳನ್ನು ಹೀರಿಕೊಂಡು ಬೆಳಕಿನ ಕಿರಣಗಳನ್ನು ಮಾತ್ರಭೂಮಿ ಮೇಲೆ ಬೀಳುವಂತೆ ಮಾಡುತ್ತದೆ.
ಸೂರ್ಯನಿಂದ ಬರುವಂತಹ ಅತಿನೇರಳೆ ಕಿರಣಗಳು ವಾತಾವರಣದಲ್ಲಿರುವ ಆಮ್ಲಜನಕದ(O2) ಮೇಲೆ ಬಿದ್ದಾಗ ಆಮ್ಲಜನಕ ಎರಡು ಅಣುಗಳಾಗಿ (O+O) ಬೇರ್ಪಡುತ್ತವೆ.
ಬೇರ್ಪಡದೇ ಇದ್ದ ಆಮ್ಲಜನಕದ(O2) ಜೊತೆ ಮತ್ತೊಂದು ಅಣು ಸಂಯೋಗವಾಗಿ ಓಜೋನ್ (O3) ಆಗುತ್ತದೆ.
ಓಝೋನ್ ಪದರು ನಾಶವಾಗಲು ಮುಖ್ಯವಾದ ಕಾರಣಗಳು:
*ಪ್ರಿಜ್ ಮತ್ತು ಕೋಲ್ಡ ಹೌಸಗಳಲ್ಲಿ ಉಪಯೋಗಿಸುವ ChloroFluoroCarbons (CFC’s) ಮತ್ತು ವಾಯುಮಾಲಿನ್ಯ,
CFCನ ಒಂದು ಅಣುವು
ಓಝೋನ್ ನ 1,00,000 ಅಣುಗಳನ್ನು ನಾಶ ಮಾಡುತ್ತದೆ.
ಇದು ಸರಪಳಿ ರಾಸಾಯನಿಕ ಕ್ರಿಯೆಯಾಗಿದೆ.
*ಬಾಹ್ಯಾಕಾಶ ಸಂಶೋಧನೆ, ಉಪಗ್ರಹಗಳ ಉಡಾವಣೆಗೆ ಹಾರಿಬಿಡುವ ರಾಕೆಟ್‌ಗಳಿಂದ ಹಾನಿ.
*ಬೃಹತ್ ಕೈಗಾರಿಕೆ ಮತ್ತು ವಾಹನಗಳ ಹೊಗೆ.
ಓಝೋನ್ ಪದರದ ನಾಶದಿಂದಾಗುವ ಪರಿಣಾಮಗಳು:
ಅತಿಯಾದ ಮಳೆ,
ಅತಿಯಾದ ಬರ,
ಸಮುದ್ರ ಮಟ್ಟದ ಏರಿಕೆ,
ನದಿ ಪ್ರವಾಹಗಳು,
ಒಣಗುತ್ತಿರುವುದು & ಬರಿದಾಗುವ ಕಾಡುಗಳು,
ಭೂತಾಪ ಏರಿಕೆ,
ಅತಿಯಾದ ಚಳಿ,
ಅತಿಯಾದ ಶಾಖ,
ಚಂಡಮಾರುತಗಳ ಹೆಚ್ಚಳ ಮತ್ತು ಇಂಗಾಲ ಇತ್ಯಾದಿ ವಾಯುಗಳ ಹೊರಸೊಸುವಿಕೆ ಹೆಚ್ಚಳದಿಂದ ವಾಯುಮಾಲಿನ್ಯ ಹೆಚ್ಚಾಗುತ್ತಿದೆ.
ಇದರಿಂದಾಗಿ ಶಹರದಲ್ಲಿ ಉಸಿರಾಡಲು ಶುದ್ಧವಾದ ಗಾಳಿಸಿಗುವುದೇ ಕಷ್ಟವಾಗಿದೆ. ಮತ್ತು ಮನುಷ್ಯನು ಚರ್ಮದ ಕ್ಯಾನ್ಸರ್ ಗೆ ತುತ್ತಾಗುತ್ತಾರೆ.
ಭೂಮಿಯ ಮೇಲಿರುವ ಓಝೋನ್ ಪದರು ನಾಶವಾದರೆ ಸೂರ್ಯನಿಂದ ಬರುವ ಅತಿನೇರಳೆ ಕಿರಣಗಳು ನೇರವಾಗಿ ಭೂಮಿಯ ಮೇಲೆ ಬೀಳುತ್ತವೆ.
ಆಗ ಭೂಮಿಯ ಮೇಲೆ ಅತಿಯಾದ ಶಾಖ, ಉಂಟಾಗುತ್ತದೆ.
ಭೂಮಿಯ ಮೇಲೆ ಇರುವ ಉತ್ತರ,
ದಕ್ಷಿಣ ಧೃವದಲ್ಲಿ ಹಾಗೂ ಭೂಮಿಯ ಮೇಲೆ ಇರುವ ಎಲ್ಲ ಮಂಜುಗಡ್ಡೆ ಕರಗಿ ನೀರಾಗಿ ನದಿಗಳ ಮುಖಾಂತರ ಸಮುದ್ರವನ್ನು ಸೇರುತ್ತವೆ.
ಆಗ ಸಮುದ್ರದ ಮಟ್ಟವು 113 ಅಡಿಗಳಷ್ಟು ಏರುತ್ತದೆ.
ಸಮುದ್ರ ಮಟ್ಟ ಇಷ್ಟು ಏರಿದರೆ ಭೂಮಿಯು ನೀರಿನಿಂದ ಆವರಿಸುತ್ತದೆ.
ಈ ದಿನವನ್ನೇ ನಾವು “ಡೂಮ್ಸಡೇ” ಎಂದು ಕರೆಯುತ್ತೇವೆ.
ಮಾನವನು ಇದೇ ರೀತಿಯಾಗಿ ಪರಿಸರವನ್ನು ನಾಶಮಾಡುತ್ತ ಹೋದರೆ ಒಂದು ದಿನ ಭೂಮಿಯು ಮಂಗಳ ಗ್ರಹದಂತೆ ಬರಡಾಗಿ ಬಿಡುತ್ತದೆ.
ಓಝೋನ ಪದರನ್ನು ರಕ್ಷಣೆ ಮಾಡುವ ವಿಧಾನಗಳು :
ಓಜೋನ್ ರಕ್ಷಣೆಗಾಗಿ ಇಷ್ಟು ಮಾಡಬೇಕು
* ಕೃಷಿಯಲ್ಲಿ ಕೀಟನಾಶಕವಾಗಿ ಬಳಸುತ್ತಿರುವ ಮಿಥೈಲ್ ಬ್ರೋಮೈಡ್‌ಗೆ ನಿಷೇಧ
* ಅವಶ್ಯವಿದ್ದಾಗ ಮಾತ್ರ ವಾಹನ ಬಳಕೆ. ಸಾರ್ವಜನಿಕ ಸಾರಿಗೆಗೆ ಆದ್ಯತೆ
* ಸಿಎಫ್‌ಸಿ ಇಲ್ಲದ ಶೀತಲ ಯಂತ್ರಗಳು, ಹವಾ ನಿಯಂತ್ರಣದ ಉಪಕರಣಗಳ ಬಳಕೆ.
* ಭೂಗ್ರಹದ ರಕ್ಷಣೆಗೆ ಹಸಿರನ್ನು ಬೆಳೆಯಿರಿ,
* ಅರಣ್ಯನಾಶ ಮಾಡಬಾರದು
* ಹೆಚ್ಚೆಚ್ಚು ಸಸ್ಯ ಬೆಳೆಸುವುದು
* ರಾಸಾಯನಿಕ ಬಳಕೆ ಮತ್ತು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು.
* ಪೆಟ್ರೋಲ್, ಡಿಸೆಲ್ ವಾಹನಗಳ ಬಳಕೆ ಕಡಿಮೆ ಮಾಡುವುದು.
* ರೆಪ್ರಿಜರೇಟರ್ ಹಾಗೂ ಕೋಲ್ಡ್ ಹೌಸಗಳಲ್ಲಿ CFCs ಅಣುವಿನ ಬದಲು Hydro ChloroFluoroCarbon (HCFCs) ರಾಸಾಯಿನಿಕ ಉಪಯೋಗಿಸಬೇಕು.
ನಾವೆಲ್ಲರೂ ಮಾಡಲೇಬೇಕಾದ ಸಂಕಲ್ಪ:
“Save ozone layer else you may lie in no zone”
“ಓಝೋನ್ ಇಲ್ಲದ ಭೂಮಿಯು
ಮೇಲ್ಛಾವಣಿ ಇಲ್ಲದ ಮನೆಯಂತೆ”
ಆದ್ದರಿಂದ
‘ವಿಶ್ವ ಓಝೋನ್ ದಿನ’ ದಂದು ನಾವು ಪ್ರತಿಜ್ಞೆ ಗೈಯೋಣ
“ನಾವು ಇಂದಿನಿಂದ ಪರಿಸರ ಮಾಲಿನ್ಯ ಹಾಗೂ ಓಝೋನ್ ಪದರಿನ ನಾಶ ಮಾಡುವುದನ್ನು ನಿಲ್ಲಿಸುತ್ತೇವೆ.
ನಾವು ವಾಸಿಸುವ ಭೂಮಿಯನ್ನು ಚೆನ್ನಾಗಿ ಇಟ್ಟುಕೊಂಡು ಹೇಗೆ ನಮ್ಮ ಹಿಂದಿನವರು ಓಝೋನ್ ಸಹಿತ ಭೂಮಿಯನ್ನು ಕಾಪಾಡಿಕೊಂಡು ನಮಗೆ ಕೊಟ್ಟರೋ, ಹಾಗೆ ನಾವು ಮುಂದಿನ ಪೀಳಿಗೆಗೆ ಓಝೋನ್ ಸಹಿತ ಭೂಮಿಯನ್ನು ಕೊಡುತ್ತೇವೆ”.ಎಂದು ಸಂಕಲ್ಪ ಮಾಡೋಣ, ಆ ನಿಟ್ಟಿನಲ್ಲಿ ಪ್ರಯತ್ನಿಸುತ್ತಾ ಇದರ ಮಹತ್ವವನ್ನು ಎಲ್ಲರಿಗೂ ಸಾರೋಣ “ನಾವು ಬದುಕಿ ನಮ್ಮ ಮುಂದಿನ ಪೀಳಿಗೆಗೆ ಬದುಕಲು ಅವಕಾಶ ಮಾಡುವ ಮೂಲಕ ನಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳೋಣ”
ವಿಶ್ವ ಓಝೋನ್ ದಿನದ ಶುಭಾಶಯಗಳು.

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

ಬ್ರಹ್ಮಶ್ರೀ ನಾರಾಯಣ ಗುರು.
image
೧೨ನೆ ಶತಮಾನದ ಬಸವಣ್ಣನ ಕಾಲದ ಕ್ರೌರ್ಯಕ್ಕಿಂತ ಇಮ್ಮಡಿ, ಮುಮ್ಮಡಿಯಾದ ಕ್ರೌರ್ಯ, ದೌರ್ಜನ್ಯ, ಹಿಂಸೆ, ಬುದ್ಧಿ ಜೀವಿಗಳ ನಾಡಾದ ಕೇರಳದಲ್ಲಿ ೧೯ನೆ ಶತಮಾನದ ಅಂತ್ಯ ಮತ್ತು ೨೦ನೆ ಶತಮಾನದ ಆರಂಭದಲ್ಲಿ ನಡೆದಿತ್ತು. ಆಗಿನ ಕೇರಳದಲ್ಲಿ ಇಡೀ ಭಾರತದಲ್ಲಿಯೇ ಕಂಡರಿಯದ ಅಮಾನುಷ ವರ್ತನೆ ನಂಬೂದರಿ ಎಂಬ ಬ್ರಾಹ್ಮಣ ವರ್ಗದಿಂದ ಶೂದ್ರರ ಮೇಲೆ, ಅಸ್ಪ್ರಷ್ಯರ ಮೇಲೆ ಮತ್ತು ಸ್ತ್ರೀಯರ ಮೇಲೆ ನಡೆದಿತ್ತು. ಅಂತಹ ಜಾತೀಯತೆ, ಅಸ್ಪ್ರಶ್ಯತೆ ಎಂಬ ವಿಷ ವೃಕ್ಷವು ಇವೀ ಶೂದ್ರ ಜನಸಮೂಹವನ್ನು ಉಸಿರುಗಟ್ಟಿ ಸಾಯುಸಿತ್ತಿರುವ ಘೋರ ಕ್ರೌರ್ಯದ ತುರಿಯಾವಸ್ಥೆಯಲ್ಲಿ `ಈಳವ’ ಎಂಬ ಅಸ್ಪ್ರಶ್ಯ ಜಾತಿಯಲ್ಲಿ ನಾರಾಯಣ ಗುರು ಎಂಬ ಪವಿತ್ರಾತ್ಮನ ಜನ್ಮವಾಯಿತು. ಇಂತಹ ಜಾತೀಯತೆ, ಅಸ್ಪ್ರಶ್ಯತೆ ಎಂಬ ಕೊಳಕಿನಿಂದ ಸಮಾಜ ಕೊಳೆಯುತ್ತಿರುವಾಗ ನಾರಾಯಣ ಗುರುಗಳು ಅವತಾರ ಪುರುಷರಂತೆ, ಪ್ರವಾದಿಯಂತೆ ಜನ್ಮ ತಾಳುತ್ತಾರೆ. ಅನ್ಯ ಧರ್ಮಗಳನ್ನು ಖಂಡಿಸಿ ಅದ್ವೈತ ಮತ ಸ್ಥಾಪನಾಚಾರ್ಯರೆಂದು ಪ್ರಸಿದ್ಧಿ ಪಡೆದ ಶ್ರೀ ಶಂಕರಾಚಾರಾಚಾರ್ಯರು ತಮ್ಮ ಅದ್ವೈತ ಸಿದ್ಧಾಂತಕ್ಕೆ ಓರ್ವ ಹರಿಜನ ಗುರು ಎಂದು ಸ್ವೀಕರಿಸಿಕೊಂಡರೆ, ಕಾಲಕ್ರಮದಲ್ಲಿ ಅವರ ಹುಟ್ಟು ನಾಡಾದ ಕೇರಳವು ಜಾತಿಭೇದ ಮತ್ತು ಅಸ್ಪ್ರಶ್ಯತೆಯ ಹುಚ್ಚರ ಸಂತೆಯಾಯಿತು. ಅಂತಹ ಗೊಂದಲಮಯ ವಾತಾವರಣದಲ್ಲಿ ನಾರಾಯಣ ಗುರುಗಳ ಜನನವಾಯಿತು. ಈಳವ ಜಾತಿ ಕೇರಳದ ಅಸ್ಪ್ರಶ್ಯ ಜಾತಿಗಳಲ್ಲಿ ಒಂದಾಗಿದ್ದಿತು. ಕೇರಳ್ದಲ್ಲಿ ಆ ಜಾತಿಯ ಜನ %೩೦ ಇದ್ದರು. ನಾರಾಯಣ ಗುರುಗಳು ಕೇವಲ ಈಳವ ಜಾತಿಯವರನ್ನಲ್ಲದೆ, ಸಮಸ್ತ ಅಸ್ಪ್ರಶ್ಯ, ನಿಮ್ನ ವರ್ಗದವರನ್ನು ಎಲ್ಲ ಸ್ತರಗಳಲ್ಲಿ ಮೇಲೆ ತರಲು ಮಾಡಿದ ಅವರ ಪ್ರಯತ್ನವನ್ನು ಅವರ ಬದುಕಿನ್ ಮಹತ್ಸಾಧನೆ ಎನ್ನಬಹುದು. ನಾರಾಯಣ ಗುರುಗಳನ್ನು ಒಂದು ನಿರ್ದಿಷ್ಟ ಜಾತಿಯ ಗುರುವೆಂದು ಭಾವಿಸುವುದು ಸಂಕುಚಿತ ಮನೋಭಾವದ ಪ್ರತೀಕವೆನಿಸುವುದು.
ಪ್ರಾಚೀನ ಮೌಲ್ಯಾದರ್ಶಗಳನ್ನು, ಸತ್ಯವನ್ನು, ಅರಸಿಕೊಂಡು ಹೋಗಿ ಮನೆಯನ್ನು ತ್ಯಜಿಸಿ, ತಪಸ್ಸು ಮಾಡುತ್ತ ಗುಡ್ಡ, ಗಿರಿ, ಬೆಟ್ಟ, ಕಂದರ, ದಟ್ಟಾರಣ್ಯ, ಗುಹೆ, ಪರ್ಣಶಾಲೆಗಳಲ್ಲಿದ್ದು ಅನೇಕ ವರ್ಷ ಸಾಧನೆ ಮಾಡಿದರು.
ಗುರುಗಳ ಸಮಾಧಿಯ ಬಳಿಕ ಥಿಯೋಸೊಫಿಕಲ್ ಸೊಸೈಟಿಯ ಅಧ್ಯಕ್ಷೆಯಾಗಿದ್ದ ಎನಿಬೆಸಂಟರು ಪತ್ರಿಕೆಯಲ್ಲಿ ಹೀಗೆ ಬರೆದಿದ್ದರು:` ನಾರಾಯಣ ಗುರುಗಳ ಬದುಕೇ ಸನಾತನ ಧರ್ಮದಂತಿದ್ದು, ಅವರ ಸೇವಾ ವ್ಯಾಪ್ತಿ ವಿಶಾಲವಾಗಿತ್ತು. ಚಿಂತನೆಗಳು ಅಮೂಲ್ಯವಾಗಿದ್ದವು. ಯಾವುದೇ ಲೋಪ ದೋಷಗಳಿರದ ಜನಪರ ಕಾಳಜಿ ಅವರಿಗೆ ಇತ್ತು. ಇತ್ತೀಚಿಗಿನ ಶತಮಾನದಲ್ಲಿ ಇಂತಹ ಗೌರವ, ಮಾನ್ಯತೆಗಳನ್ನು ಪಡೆದ ಸ್ವಾಮಿಗಳು ಯಾರೂ ಇರಲಿಲ್ಲ. ಯೋಗದಲ್ಲಿ ಅವರು ಪತಂಜಲಿ, ಜ್ನಾನದಲ್ಲಿ ಶಂಕರ, ಅಹಿಂಸೆಯಲ್ಲಿ ಬುದ್ಧ, ಮಾನವೀಯತೆಯಲ್ಲಿ ಏಸುಗಳೆಲ್ಲರಂತೆ ಇದ್ದರು. ಅವರೊಬ್ಬ ದೇವರ ಅವತಾರವೇ ಆಗಿದ್ದರು. ಭವಿಷ್ಯದಲ್ಲಿ ಅವರನ್ನು ದೇವರೆಂದು ಆರಾಧಿಸುವ್ರು.
*ನಾರಾಯಣ ಗುರುಗಳ ಜನ್ಮ*
ಶಿವಗಿರಿಯಿಂದ ೪೫ ಕಿಲೋಮೀಟರ್ ಉತ್ತರಕ್ಕೆ ತಿರುವನಂತಪುರದಿಂದ ೧೨ ಕಿಲೋಮೀಟರ್ ದೂರದ ಉತ್ತರಪೂರ್ವ ಸೀಮೆಯಲ್ಲಿರುವ ಚೆಂಬಳಾಂತಿ ಗ್ರಾಮದಲ್ಲಿ ನಾರಾಯಣ ಗುರುಗಳು ಜನಿಸಿದರು. ಅವರು ಹುಟ್ಟಿ ಬೆಳೆದ ಮನೆಯನ್ನು ಇಂದಿಗೂ ಸುರಕ್ಷಿತವಾಗಿ ಕಾಯ್ದಿರಿಸಲಾಗಿದೆ. ನಾರಾಯಣ ಗುರು ಹುಟ್ಟಿದ್ದು 18-8-1854ರಂದು ಅವರ ಹೆತ್ತವರ ಕುರಿತಾಗಿ ಗುರು ನಟರಾಜರು ಈ ಕೆಳಗಿನ ವಿವರಗಳನ್ನು ಕೊಡುತ್ತಾರೆ: “ ಆ ಹಳ್ಳಿಯಲ್ಲಿ ೧೮೫೫ರ ಸುಮಾರಿಗೆ ಒಂದು ಕೃಷಿ ಕುಟುಂಬ ಬಾಳಿತ್ತು. ತಂದೆ ಮಾದನ್ ಆಶನ್. ಆಶನ್ ಕೇವಲ ಕೃಷಿಕರಷ್ಟೇ ಆಗಿರಲಿಲ್ಲ. ಅವರು ಖಗೋಲಶಾಸ್ತ್ರ, ಆಯುರ್ವೇದದಲ್ಲಿ ತಜ್ನರಾಗಿದ್ದರು. ಆಶನ್ ಎಂದರೆ ಆಚಾರ್ಯ ಎಂಬರ್ಥ. ವಾರಕ್ಕೊಮ್ಮೆ ಅವರ ಮನೆಯ ಚಾವಡಿಯಲ್ಲಿ ಹಳ್ಳಿಯ ಜನ ಮಾದನ್ ಆಶನ್ ಅವರ ರಾಮಾಯಣ, ಮಹಾಭಾರತ ಪ್ರವಚನವನ್ನು ಕೇಳಲು ನೆರೆಯುತ್ತಿದ್ದರು. ನಾರಾಯಣ ಗುರುವನ್ನು ಮುದ್ದಿನಿಂದ `ನಾಣು’ ಎಂದು ಕರೆಯುತ್ತಿದ್ದರು.ಕೇರಳದಲ್ಲಿ ಸಾಂಪ್ರದಾಯಿಕ ಕಲಿಕೆ ಎಂದರೆ ಸಂಸ್ಕ್ರತವನ್ನು ಕಲಿಯುವುದಾಗಿತ್ತು. ನಾರಾಯಣ ಗುರು ಸುಲಭವಾಗಿ ಸಂಸ್ಕ್ರತ ಭಾಷೆ ಮತ್ತು ವ್ಯಾಕರಣವನ್ನು ಕಲಿತ. `ಸಿದ್ಧ ರೂಪಮ್’,`ಬಾಲಪ್ರಭೋದಮ್’, ಮತ್ತು ಅಮರ ಕೋಶವನ್ನು ಕಲಿತ. ನಾಣುವು ಸಂಸ್ಕ್ರತ ಮತ್ತು ಮಲೆಯಾಳಮ್ ಮಾತ್ರ ಚೆನ್ನಾಗಿ ಕಲಿತಿದ್ದನಲ್ಲದೆ ತಮಿಳನ್ನೂ ಚೆನ್ನಾಗಿ ಕಲಿತನು. ಸ್ವಪ್ರಯತ್ನದಿಂದ ತಮಿಳಿನ ಶ್ರೇಷ್ಠ ಗ್ರಂಥಗಳಾದ `ತೋಲ್ಕಾಪ್ಪಿಯನ್’, `ನನ್ನುಲ್’, `ಸಿಲಪ್ಪದಿಕಾರಮ್’, `ಮನಿಮೇಕಲಮ್’, `ತಿರುಕ್ಕುರಲ್’, ಮತ್ತು `ತಿರುವಾಚಕಮ್’, ಅಭ್ಯಸಿಸಿದನು. ಮದುವೆ ಮತ್ತು ಸಂಸಾರ ತ್ಯಾಗ ವಿಚಿತ್ರ ಎಂದರೆ ನಾಣು ಸ್ವಾಮಿಯ ಮನಸ್ಸನ್ನು ಅರಿಯದ ಸಂಬಂಧಿಕರು ಅವನಿಗೆ ಮದುವೆಯಾಗುವಂತೆ ಒತ್ತಾಯಿಸಿದರು. ನಾಣು ರಾಮಕೃಷ್ಣ ಪರಮಹಂಸರು ಶಾರದಾ ದೇವಿಯನ್ನು ಮದುವೆಯಾದಂತೆ ಮದುವೆಯಾದ್ರು. ಆ ಕಾಲದಲ್ಲಿ ವರನ ಸಹೋದರಿಯು ವಧುವಿಗೆ `ಪುತವಾ’,ಅಂದ್ರೆ ವಧುವಿನ ಬಟ್ಟೆಗಳು, ಕೊಡುವ ಸಂಪ್ರದಾಯವಿತ್ತು. ನಾರಾಯಣ ಗುರುಗಳು ಮದುವೆಗೆ ತಾನೇ ಸ್ವತಃ ಹೋಗಲಿಲ್ಲ. ಮದುವೆ ೧೮೮೨ರ್ಲ್ಲಿ ಆಯಿತು. ಸಂಸಾರ್ ಬಂಧನವನ್ನು ಹರಿದುಕೊಂಡು ಹೋಗಲು ಮದುವೆ ಒಂದು ಅಡ್ಡಿಯಾಗಲಿಲ್ಲ. ಗುರು ಹೇಳಿದರು:“ನಾವು ಈ ಜಗತ್ತಿಗೆ ಯಾವುದೋ ಒಂದು ಉದ್ದೇಶಕ್ಕೆ ಬಂದಿದ್ದೇವೆ. ನನಗೆ ನನ್ನ ಕೆಲಸ ಮಾಡಲಿದೆ. ನಿನಗೆ ನಿನ್ನ ಕೆಲಸ ನಿರ್ವಹಿಸಲಿದೆ. ನನ್ನ ದಾರಿಯಲ್ಲಿ ನಾನು ಹೋಗುತ್ತೇನೆ. ನಿನ್ನ ದಾರಿಯಲ್ಲಿ ನೀನು ಹೋಗು. ಎಂದು ಹೆಂಡತಿಗೆ ಹೇಳಿ, ತಮ್ಮ ಹಳ್ಳಿಯನ್ನೂ, ತನ್ನ ಜನರನ್ನೂ ತ್ಯಜಿಸಿದರು.
*ಚಟ್ಟಾಂಬಿ ಸ್ವಾಮಿಕಲ್ ಮತ್ತು ದೈಕೋಡ್ ಅಯ್ಯಾವು*
ಶ್ರೀ ನಾರಾಯಣ ಗುರುಗಳು ಕುಂಜನ್ ಪಿಳ್ಳೈ ಚಟ್ಟಾಂಬಿ ಸ್ವಾಮಿಕಲ್ ಅವರನ್ನು ಭೇಟಿಯಾದರು. ಅವರನ್ನು ಷಣ್ಮುಖದಾಸ್ ಎಂದೂ ಕರೆಯುತ್ತಿದ್ದರು. ಅವರಿಬ್ಬರೂ ವೇದಾಂತ ವಿಷಯವನ್ನು ಚರ್ಚಿಸಿದರು. ಅವರು ಚಟ್ಟಾಂಬಿಯವರನ್ನು ತನ್ನ ಗುರುಗಳನ್ನಾಗಿ ಸ್ವೀಕರಿಸಿದರು. ಚಟ್ಟಾಂಬಿ ಸ್ವಾಮಿಕಲ್ ನಾರಾಯಣ ಗುರುಗಳನ್ನು ದೈಕೋಡ್ ಅಯ್ಯಾಯುವಿಗೆ ಪರಿಚಯಿಸಿದರು. ಅಯ್ಯಾವು ಸುಬ್ರಹ್ಮಣ್ಯ ದೇವರ ಆರಾಧಕರಾಗಿದ್ದರು. ಮತ್ತು ಯೋಗ ಗುರುಗಳಗಿದ್ದರು. ದೈಕೋಡ್ ನಾಣು ಆಶನ್ ರಿಗ
ೆ ಏಕಾಂತ ಪ್ರದೇಶಕ್ಕೆ ಕೊಂಡೊಯ್ದು ಯೋಗವನ್ನು ಕಲಿಸಿದರು. ಈ ಯೋಗ ತರಬೇತಿಯಿಂದ ಪ್ರೇರೇಪಿತರಾಗಿ ನಗರ್ ಕೊಯಿಲ್ ಹತ್ತಿರದ ಮರತು ಮಲೈ ಬೆಟ್ಟವೊಂದರಲ್ಲಿ ಏಕಾಂತಕ್ಕಾಗಿ, ಧ್ಯಾನಕ್ಕಾಗಿ ಆಶ್ರಯ ಪಡೆದರು. ಅವರು ಗುಹೆಯೊಂದರಲ್ಲಿ ಆಳವಾದ ಧ್ಯಾನದಲ್ಲಿ ತೊಡಗಿದರು. ಕಾಡು ಪ್ರಾಣಿಗಳು ಅವರ ಮಿತ್ರರಾಗಿದ್ದವು. ಅವರು ಗಿಡ ಮೂಲಿಕೆಗಳ ಎಲೆಗಳನ್ನು ತಿಂದು ನೀರು ಕುಡಿದು ಬದುಕಿದರು. ಮರುತಮಲೈಯಲ್ಲಿ ಅವರಿಗೆ ಜ್ನಾನೋದಯವಾಯಿತು. ನಾರಾಯಣ ಗುರುಗಳಿಗೆ ಶಂಕರರ ವೇದಾಂತವು ಹೊಸತನದಿಂದ ಕೂಡಿದ್ದಂತೆ ಎನಿಸಿತು. ಮನುಷ್ಯನ ಜೀವನಕ್ಕೆ ಅವಶ್ಯವಾದ ನ್ಯಾಯ, ಮತ್ತು ಸಮಾನತೆಯ ಕುರಿತಾಗಿ ಅದ್ವೈತ ತತ್ವ ಇದೆ ಎಂದು ಕಂಡುಕೊಂಡರು. ಮನುಷ್ಯ ಮನುಷ್ಯರ ನಡುವೆ ಸಂಬಂಧಗಳ ಕುರಿತು ಸಮಾನತೆ, ನ್ಯಾಯ, ಸ್ವಾತಂತ್ರ್ಯವನ್ನು ಬಯಸುವ ಅದ್ವೈತ ನಾರಾಯಣ ಗುರುಗಳದಾಗಿತ್ತು. ಶ್ರೀ ನಾರಾಯಣ ಗುರುಗಳ ಅಧ್ಯಾತ್ಮಿಕ ಅನುಭಾವವು ಅವರ ರಚನೆಗಳಾದ `ಆತ್ಮೋಪದೇಶ ಶತಕಂ’, ದಲ್ಲಿ ವ್ಯಕ್ತವಾಗಿದೆ.
ನಾರಾಯಣ ಗುರುಗಳು ಮತ್ತು ಅದ್ವೈತ ಸಿದ್ಧಾಂತ
ನಾರಾಯಣ ಗುರುಗಳು ಅರುವಿಪ್ಪುರಂನಲ್ಲಿ ಆಳವಾಗಿ ಧ್ಯಾನಿಸುತ್ತ ಸ್ವಲ್ಪ ದಿನಗಳನ್ನು ಕಳೆದರು. ಇಲ್ಲಿ ಅವರು ಬೃಹತ್ ಸಮಾಜ ಕ್ರಾಂತಿಯ ಬೀಜವನ್ನು ಬಿತ್ತಿದರು. ಅವ್ರು ಬದುಕುತ್ತಿರುವ ಸಮಾಜವು ಜಾತಿ ಎಂಬ ರಾಕ್ಷಸನ ಬಲೆಯಲ್ಲಿ ಸಿಕ್ಕಿ ಬಿದ್ದಿತ್ತು. ಕೆಳ ಜಾತಿಯವರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿರಲಿಲ್ಲ. ಅವರಿಗೆ ಅಲ್ಲಿ ಪೂಜೆ ಮಾಡುವ ಹಕ್ಕನ್ನು ನಿರಾಕರಿಸಲಾಗಿತ್ತು. ಶಿವರಾತ್ರಿಯ ದಿನ ಶ್ರೀ ನಾರಾಯಣ ಗುರುಗಳು ಅರುವಿಪ್ಪುರಂನಲ್ಲಿ ಎಲ್ಲ ವಿಜೃಂಭಣೆಯೊಂದಿಗೆ ಶಿವಮೂರ್ತಿಯನ್ನು ಪ್ರತಿಷ್ಟಾಪಿಸಿದರು. ಮೇಲ್ಜಾತಿ ದೇವಸ್ಥಾನಗಳಿಗೆ ನಿರಾಕರಿಸಲ್ಪಟ್ಟ ಪ್ರವೇಶವು ಅರುವಿಪ್ಪುರಂನಲ್ಲಿ ಎಲ್ಲರಿಗೂ ಮುಕ್ತವಾಗಿ ತೆರೆಯಲ್ಪಟ್ಟಿತು. ಈ ಧಾರ್ಮಿಕ ಕ್ರಿಯೆಯು ಹಿಂದೂ ಸಮಾಜದಲ್ಲಿ ಧರ್ಮ ಪುನರ್ ಪ್ರತಿಷ್ಟಾಪನೆಗೆ ದಾರಿ ಮಾಡಿಕೊಟ್ಟಿತು. ನಂಬೂದರಿ ಬ್ರಾಹ್ಮಣರೊಬ್ಬರು `ನಿಮಗೆ ಮೂರ್ತಿ ಪ್ರತಿಷ್ಟಾಪನೆ ಮಾಡಲು ಯಾವ ಹಕ್ಕಿದೆ?’ ಎಂದು ಕೇಳಿದಾಗ ನಾರಾಯಣ ಗುರುಗಳು ತಮಾಷೆಯಿಂದ ಉತ್ತರಿಸಿದರು: `ನಾನು ಕೇವಲ ಈಳವ ಶಿವನನ್ನು ಪ್ರತಿಷ್ಟಾಪಿಸಿದ್ದೇನೆ.’ ಮತ್ತು ಈ ಧಾರ್ಮಿಕ ಕ್ರಿಯೆಯ ಸಮರ್ಥನೆಯನ್ನು ನೀಡಿದರು.ಇಡೀ ಭಾರತದಲ್ಲಿ ಮೊತ್ತ ಮೊದಲ ಬಾರಿಗೆ ಈಗಾಗ್ಲೇ ಕೇವಲ ಬ್ರಾಹ್ಮಣರಿಗೆ ಮಾತ್ರ ಮೀಸಲಾದ ವಿಶೇಷ ಹಕ್ಕನ್ನು ಕೆಳ ಜಾತಿಯ ಸ್ವಾಮಿ ಪಡೆದುಕೊಂಡರು. ನಿಜವಾದ ಯೋಗಿಗೆ ಮೂರ್ತಿಯನ್ನು ಪ್ರತಿಷ್ಟಾಪನೆ ಮಾಡುವ ಅಧಿಕಾರ ಎಂದು ನಾರಾಯಣ ಗುರುಗಳು ಸ್ಥಾಪಿಸಿದರು. ಗುರುಗಳು ಹೇಳುತ್ತಾರೆ:“ಯಾವುದೇ ಧರ್ಮವಾಗಲಿ ಮನುಷ್ಯನನ್ನು ಒಳ್ಳೆಯವನನ್ನಾಗಿ ಮಾಡುವುದೇ ಧರ್ಮ. ಶಿವ ದೇವಸ್ಥಾನವನ್ನು ಸ್ಥಾಪಿಸಿದ ಮೇಲೆ `ಈ ದೇವಸ್ಥಾನವನ್ನು ಯಾವುದೇ ಜಾತಿ, ಮತ್, ಧರ್ಮದವರು, ಸ್ಮಾಜದ ಎಲ್ಲ ವರ್ಗದವರು ಲಾಭ ಪಡೆಯುವಂತಹ ಆದರ್ಶ ಸ್ಥಳವಾಗಬೇಕು.’ ಎಂದು ಘೋಷಿಸಿದರು. ಇದು ಮನುಷ್ಯನ ಕಲ್ಯಾಣಕ್ಕಾಗಿ ಮತ್ತು ಬಿಡುಗಡೆಗಾಗಿ ಇರುವ ಅದ್ವೈತ ಧಾರ್ಮಿಕ ಮಾರ್ಗ. ಅರುವಿಪ್ಪುರಂನಲ್ಲಿ ಕೆಲವೇ ದಿನಗಳಲ್ಲಿ ಒಂದು ಆಶ್ರಮವಾಯಿತು. ೧೮೯೯ರಲ್ಲಿ ದೇವಸ್ಥಾನದ ಆಡಳಿತವನ್ನು ನೋಡಿಕೊಳ್ಳಲು ಒಂದು ಸೊಸೈಟಿಯನ್ನು ಸ್ಥಾಪಿಸಲಾಯಿತು. ಆ ಮೇಲೆ ಅದು `ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಮ್’ ಎಂಬ ಸಂಸ್ಥೆಯಾಗಿ ಪುನರ್ರಚನೆಗೊಂಡಿತು. ಅದನ್ನು ಸಂಕ್ಷಿಪ್ತವಾಗಿ ಎಸ್. ಎನ್. ಡಿ. ಪಿ. ಎಂದು ಕರೆಯಲಾಗುತ್ತದೆ.
ಶಿವಗಿರಿ ಮತ್ತು ನಾರಾಯಣ ಗುರುಗಳು
ವರ್ಕಲ ಬೆಟ್ಟಗಳನ್ನು `ಶಿವಗಿರಿ’ ಎಂದು ಕರೆಯಲಾಗುತ್ತದೆ. ವರ್ಕಲ ತ್ರಿವೇಂದ್ರಂನಿಂದ ಉತ್ತರಕ್ಕೆ ೨೦ ಮೈಲುಗಳ್ಷ್ಟು ದೂರವಿರುವ ಕರಾವಳಿ ತೀರದ ಪಟ್ಟಣವಾಗಿದೆ. ಷಿವಗಿರಿಯು ಶಿವ ಮತ್ತು ಶಕ್ತಿಗೆ ಅಂದರೆ ಶಾರದಾ ದೇವಿಗೆ ಅರ್ಪಿತವಾಗಿರುವ ಪವಿತ್ರ ಕ್ಷೇತ್ರ. ಗುರುಗಳು ದಕ್ಷಿಣ ಕಾಶಿಯಾದ ವರ್ಕಲಕ್ಕೆ ಬಂದು ೧೯೦೪ರಲ್ಲಿ ಧಾರ್ಮಿಕ ಮಠವೊಂದನ್ನು ಸ್ಥಾಪಿಸಿದರು. ಎಸ್. ಎನ್. ಡಿ. ಪಿ. ಸ್ಥಾಪಿಸಿದ ೧೮ ವರ್ಷಗಳ ನಂತರ ೧೯೧೨ರಲ್ಲಿ ಶಿವಗಿರಿಯಲ್ಲಿ ಶಾರದಾ ದೇವಸ್ಥಾನವನ್ನು ಸ್ಥಾಪಿಸಿದರು. ಗುರುಗಳಿಗೆ ಎಲ್ಲ ಸಮುದಾಯದಿಂದ ಶಿಷ್ಯರಿದ್ದರು. ಹರಿಜನರೂ ಕೂಡಾ ಗೀತೆಯ ಶ್ಲೋಕಗಳನ್ನು ಪಠಿಸಬಹುದಿತ್ತು. ಉಪನಿಷತ್ತುಗಳನ್ನು ಪಠಿಸಬಹುದಿತ್ತು; ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಬಹುದಿತ್ತು. ಗುರುಗಳ ದೃಷ್ಟಿಯಲ್ಲಿ ಬಡವರ, ದುರ್ಬಲರ ಸೇವೆಯೇ ದೇವರ ಸೇವೆಯಾಗಿತ್ತು. ಎಸ್. ಎನ್. ಡಿ. ಪಿ. ಯನ್ನು ಬಸವಣ್ಣನ ಅನುಭವ ಮಟಪಕ್ಕೆ ಹೋಲಿಸಬಹುದಾಗಿದೆ.
*ಗುರುಗಳು ಮತ್ತು ಅದ್ವೈತ ಆಶ್ರಮ*
ಗುರುಗಳು ಶಿವಗಿರಿಯನ್ನು ಸ್ಥಾಪಿಸಿದ ಮೇಲೆ ಅಲವೇಯಿಗೆ ವಾಸ್ತವ್ಯವನ್ನು ಬದಲಾಯಿಸಿ ಅದನ್ನು ಪ್ರಧಾನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರವನ್ನಾಗಿ ಮಾಡಿದರು. ಅವರ ಶ್ರೇಷ್ಠ ಗುರುಗಳಾದ ಶಂಕರಾಚಾರ್ಯರ ನೆನಪಿಗೆ ಅಲವೇಯಿಯಲ್ಲಿ ೧೯೧೩ರ್ಲ್ಲಿ ಅದ್ವೈತ ಆಶ್ರಮವನ್ನು ಸ್ಥಾಪಿಸಿದರು. ಅಲವೇಯಿ ಅದ್ವೈತ ಆಶ್ರಮವು ಸಂಸ್ಕೃತ ಮತ್ತು ಅದ್ವೈತ ತತ್ವ ಶಾಸ್ತ್ರವನ್ನು ಪ್ರಚಾರಪಡಿಸುವ ಮತ್ತು ಅಭ್ಯಸಿಸುವ ಕೇಂದ್ರವಾಯಿತು. ಗುರುಗಳು ೧೯೧೨ರಷ್ಟೊತ್ತಿಗೆ ತಮ್ಮ ಮುಖ್ಯ ಕಚೇರಿಯನ್ನು ಬದಲಾಯಿಸಿದರು. ಅವರು ಇನ್ನೂ ಮುಂದೆ ಉತ್ತರಕ್ಕೆ ಅಲೆದಾಡಿದರು. ಹಲವಾರು ತಾಸುಗಳ ಪ್ರವಾಸದ ನಂತರ ಕೇಪ್ ಕೊಮೋರಿನಿಂದ ಮಂಗಳೂರವರೆಗೆ ಅವರು ಎಲ್ಲವರಿಂದ ಗುರು ಎಂದು ಗೌರವಿಸಲ್ಪಟ್ಟರು. ಅವರು ಅಲವೇಯಿಯನ್ನು ತಮ್ಮ ವಾಸ ಸ್ಥಾನವನ್ನಾಗಿ ಮಾಡಿಕೊಡರು. ನದೀ ತೀರದಲ್ಲಿ ಒಣಗಿದ ತಾಳೆ ಗರಿಗಳಿಂದ ಮಾಡಿದ ಸರಳ ಮಾಡಿನಡಿಯಲ್ಲಿ ಅವರು ಪುನ್ಃ ಧ್ಯಾನದಲ್ಲಿ ಮಗ್ನರಾದರು.
*ನಾರಾಯಣ ಗುರುಗಳು ಮತ್ತು ಸಾಮಾಜಿಕ ಸುಧಾರಣೆಗಳು*
ಅಧ್ಯಾತ್ಮಿಕ ಸಾಧನೆಯಾದ ಬ್ರಹ್ಮನ್- ಆತ್ಮನ್ ಸಾಕ್ಷಾತ್ಕಾರದ ನಂತರವೂ ಗುರುಗಳು ಮಾನವ ಜನಾಂಗದ ಉನ್ನತಿಗಾಗಿ ಸಮಾಜ ಸೇವೆಯನ್ನು ಕೈಗೆತ್ತಿಕೊಂಡರು. ಎಸ್. ಎನ್. ಡಿ. ಪಿ. ಯ ಯೋಗಂ ಸಂಸ್ಥೆಯು ಶಿಕ್ಷಣ ಮತ್ತು ಗುರುಗಳ ಸಿದ್ಧಾಂತವಾದ ಒಂದೇ ಜಾತಿ, ಒಂದೇ ದೇವರು, ಒಂದೇ ಧರ್ಮ ಇವುಗಳ ಮೂಲಕ ಮಾನವ ಸಮಾಜವನ್ನು ಎತ್ತರಕ್ಕೆ ಕೊಂಡೊಯ್ಯುವುದು, ಉತ್ತಮಿಸುವುದು, ವಿಶೇಷವಾಗಿ ಮೂಲ್ಭೂತಮಾನವ ಹಕ್ಕುಗಳ ಸಂರಕ್ಷಣೆಗಾಗಿ ಅಸ್ಪ್ರಶ್ಯತಾ ನಿರ್ಮೂಲ ಮಾಡುವುದು ಈ ಮುಂತಾದ ಗುರಿಗಳನ್ನು ಇಟ್ಟುಕೊಂಡಿತ್ತ್ರು. ಮೊ
ದಲನೆಯದಾಗಿ ತನ್ನು ಆಧ್ಯಾತ್ಮಿಕ ಜ್ನಾನವನ್ನು ಶ್ರೀಮಂತಗೊಳಿಸಿಕೊಳ್ಖುವುದು ಮತ್ತು ಅದನ್ನು ಜನರ ಕಲ್ಯಾಣಭಿವೃದ್ಧಿಗಾಗಿ ಬಳಸಿಕೊಳ್ಳುವುದು. ಎರಡನೆಯ ಹೆಜ್ಜೆಯೆಂದರೆ ಜನರೊಂದಿಗೆ ವ್ಯಕ್ತಿಗತ ಸಂಪರ್ಕವನ್ನು ಹೊಂದಿರುವುದು. ನೊಂದ ಜನರ ಹೃದಯಗಳನ್ನು ಸಾಂತ್ವನದ ಮಾತುಗ್ಳಿಂದ ತಣಿಸುವುದು, ಅವರ ಮನಸ್ಸಿಗೆ ನೆಮ್ಮದಿಯನ್ನು ನೀಡುವುದು. ಕೊನೆಯದಾಗಿ ಅವರೆ ಚ್ಟುವಟಿಕೆಗಳು ಎಸ್. ಎನ್. ಡಿ. ಪಿ. ಯೋಗಮ್ ಮತ್ತು ಅಧ್ಯಾತ್ಮಿಕ ಅರಸುವಿಕೆಯಲ್ಲಿ ತೊಡಗಿರುವ ಶಿಷ್ಯರ ಆಮಂತ್ರಣಕ್ಕೆ ಸೀಮಿತಗೊಂಡವು. ೧೮೮೪ ರಿಂದ ೧೯೦೪ರವರೆಗೆ ಗುರುಗಳು ಅರುವಿಪ್ಪುರಮ್ ನ್ಲ್ಲಿ ವಾಸ್ತವ್ಯ ಹೂಡಿದರು. ಈ ಅವಧಿಯಲ್ಲಿಯೇ ಎಸ್. ಎನ್. ಡಿ. ಪಿ. ಯೋಗಮ್ ಸ್ಥಾಪನೆಯಾಯಿತು. ಯೋಗಮ್ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ತುಳಿತಕ್ಲೂಳಗಾದ ಜನರ ಶಕ್ತಿಶಾಲಿ ದನಿಯಾಯಿತು. ಗುರುಗಳು ದುರ್ಬಲ ವರ್ಗದವರ ಏಳ್ಗೆಗೆ ಅದರಲ್ಲೂ ಹರಿಜನರ ಏಳ್ಘೆಗಾಗಿ ಸಮಾಜ ಸುಧಾರಕರಿಗೆ ಸರಿಯಾದ ನಿರ್ದೇಶನಗಳನ್ನು ನೀಡಿ ಉನ್ನತ ಆದರ್ಶಗಳನ್ನು ಪ್ರಚಾರ ಮಾಡಲು ಪ್ರೇರಣೆ ನೀಡಿದರು. ಬೋಡಕರಿಗೆ ಶಿಕ್ಷಣ, ಧರ್ಮ, ನೀತಿ ತತ್ವಗಳು ನೀತಿ, ನಿಯಮಗಳು, ಪದ್ಧತಿಗಳು ಉದ್ದಿಮೆ ಇವುಗಳ ಬಗ್ಗೆ ಒತ್ತು ನೀಡುವಂತೆ ಸೂಚಿಸಲಾಯಿತು. ಗುರುಗಳ ಸ್ಂದೇಶ ಹೀಗಿದೆ:` ಶಿಕ್ಷಣ ಪ್ಡೆಯಿರಿ; ನೀವು ಸ್ವತಂತ್ರರಾಗುತ್ತೀರಿ. ಸಂಘಟಿತರಾಗಿರಿ; ನೀವು ಬಲಿಷ್ಟರಾಗುತ್ತೀರಿ. ಔದ್ಯೋಗಿಕವಾಗಿಉದ್ದಿಮೆಗಳನ್ನು ಸ್ಥಾಪಿಸಿ; ನಿಮ್ಮ ಆರ್ಥಿಕ ಪರಿಸ್ಥಿತಿಯು ಸುಧಾರಿಸುತ್ತದೆ. ಗುರುಗಳು ತಾವು ಉದ್ದೇಶಿಸಿರುವ ಸಮಾಜ ಸುಧಾರಣೆ ಜನರಿಗೆ ತಲುಪುವಂತೆ `ವಿವೇಕೋದಯಮ್’ ಎಂಬ ಮಾಸಿಕ ಪತ್ರಿಕೆಯನ್ನು ಹೊರತರುವಂತೆ ಸೂಚಿಸಿದರು. ೧೬ನೆ ಒಕ್ಟೋಬರ್ ೧೯೦೫ ರಂದು ಪರವುರ್ ನ್ ಸಭಯಲ್ಲಿ ಅಧ್ಯಕ್ಷತೆ ವಹಿಸಿ ಮದುವೆಯ ಸಮಾರಂಭಕ್ಕೆ ಕೆಲ್ವು ಹೊಸ ನಡೆಗಳನ್ನು ಪರಿಚಯಿಸಿದರು. ಮತ್ತು `ತಾಳಿಕೆಟ್ಟು’, `ತಿರ್ಂಡು ಕಲ್ಯಾಣಮ್’, ಅಂತಹ ಕೆಟ್ಟ ಸಾಂಪ್ರ್ದಾಯಗಳನ್ನು ನಿರ್ಮೂಲ್ನ ಮಾಡುವ್ಂತೆ ಕರೆ ಕೊಟ್ಟರು. ತಾಳಿಕೆಟ್ಟು ಅಥವಾ ಮಿನ್ನು ಕೆಟ್ಟು ಅಥವಾ ಕೆಟ್ಟು ಕಲ್ಯಾಣಮ್ ಇದು ಹಿಂದುಳಿದ ವರ್ಗದವರಲ್ಲಿ ದುಂದು ವೆಚ್ಚಕ್ಕೆ ದಾರಿ ಮಾಡಿಕೊಡುವ ಅರ್ಥವಿಲ್ಲದ ಕೆಟ್ಟ ಸಂಪ್ರದಾಯ. ಇಂಥ ಹಲವಾರು ಸಂಪ್ರದಾಯಗಳ್ಲ್ಲಿ ತಾಳಿ ಕಟ್ಟುವ ಆಚರಣೆಯೂ ಒಂದು. ಒಂದು ಹೆಣ್ಣು ಮಗುವಿಗೆ ಸುಮಾರು ೫ ವರ್ಷ ತುಂಬಿದಾಗ ಪ್ರಾಯಕ್ಕೆ ಬರುವ ಮೊದಲೆ ಮಾಡುವ ಅಣಕು ಮದುವೆ ಇದಾಗಿದ್ದು, ಹುಡುಗಿಯ ಕೊರಳಿಗೆ ಒಬ್ಬ ಹುಡುಗ, ಕೆಲವೊಮ್ಮೆ ಯಾರಾದರೂ ಯುವಕನೊಬ್ಬ ತಾಳಿ ಕಟ್ಟುತ್ತಾನೆ. ಭವಿಷ್ಯದಲ್ಲಿ ಮದುವೆ ಮಾಡುತ್ತೇವೆ ಎಂಬುದರ ಸಂಕೇತವಾದ ಈ ಅಣಕು ಮದುವೆಗೆ ಯ್ವುದೇ ಕಾನೂನಿನ ಆಧಾರವಿಲ್ಲ. ಹೀಗೆ ತಾಳಿ ಕಟ್ಟಿದವನೇ ಮದುವೆಯಾಗುತ್ತಾನೆ ಎಂಬ ನಿಯಮವೇನೂ ಇಲ್ಲ. ನಿಜವಾದ ಮದುವೆಗೆ ಮಾಡುವಂತೆ ಎಲ್ಲ ಕಾರ್ಯಕ್ರಮಗಳು ನಡೆಯುತ್ತವೆ. ತಾಳಿ ಕಟ್ಟಿದ ನಂತರ ಹುಡುಗ ಅವನ ಪಾಡಿಗೆ ತನ್ನ ಜೊತೆಗಾರರೊಂದಿಗೆ ಹೋಗುತ್ತಾನೆ. ಆ ಹುಡುಗನಿಗೆ ಹುಡುಗಿಯ ಕಡೆಯವರು ಬೇಕಾದಷ್ಟು ಹಣ್, ಹೊಸ ಬಟ್ಟೆ, ತೆಂಗಿನ ಕಾಯಿಗಳನ್ನು ಕೊಡುತ್ತಾರೆ. ಹಬ್ಬದ ವಾತಾವರಣ, ಭೂಇ ಭೋಜನ, ಉಡುಗೊರೆ ಮುಂತಾದ ಕಾರ್ಯಕ್ರಮಗಳೆಲ್ಲ ವೈಭವದಿಂದಲೆ ನಡೆಯುತ್ತವೆ. ಹುಡುಗಿ ತನ್ನ ತವರು ಮನೆಗೆ ಹೋದಾಗ ತಾಳಿಯನ್ನು ತೆಗೆಯುತ್ತಾರೆ. ಮುಂದೆ ಋತುಮತಿಯಾದ ಬಳಿಕ ವರನನ್ನು ಹುಡುಕಿ ಮೊದ್ಲು ತಾಳಿ ಕಟ್ಟಿದವನೂ ಆಗಬಹುದು, ವ್ಯವಸ್ಥಿತವಾದ ನಿಜ ಮದುವೆಯನ್ನು ಏರ್ಪಡಿಸುತ್ತಾರೆ. ಈ ಅರ್ಥಹೀನ, ಲಜ್ಜಾಸ್ಪದ ಆಚರಣೆಗಳನ್ನು ಗುರುಗಳು ವಿರೋಧಿಸಿದರು. ಶ್ರೀಮ್ಂತ ಮತ್ತು ಸಂಪ್ರದಾಯಸ್ಥರು ಇದು ಪ್ರತಿಷ್ಟೆಯ ಪ್ರಶ್ನೆ, ನಿಲ್ಲಿಸಿದರೆ ಸಮಾಜಕ್ಕೆ ಕೇಡುಂಟಾಗುತ್ತದೆ ಎಂಬ ವಾದವನ್ನು ಮುಂದಿಟ್ಟರೂ, ಕೇಳ್ದೇ ಗುರುಗಳು ಹೋರಾಟವನ್ನು ಮುಂದುವರಿಸಿದರು. ಎಸ್. ಎನ್. ಡಿ. ಪಿ. ಯೋಗಂ ನ ಮುಖವಾಣಿಯಾದ `ವಿವೇಕೋದಯಂ’ ಪತ್ರಿಕೆಯ ಎಲ್ಲ ಸಂಚಿಕೆಗಳಲ್ಲೂ ಈ ಆಚರಣೆಯಿಂದಾಗುವ ಕೆಡುಕುಗಳನ್ನು ಪ್ರಕಟಿಸುತ್ತಲೇ ಬಂದರು. ೧೯೦೬ರಲ್ಲಿ ಚೇರ್ತಲ ತಾಲೂಕಿನ ದೊಡ್ಡ ಶ್ರೀಮಂತನೂ, ಗುರುಗಳ ಭಕ್ತನೂ ಆಗಿದ್ದ ಕೊಚ್ಚು ರಾಮನ್ ವೈದ್ಯರ್ ಎಂಬವರ ಕುಟುಂಬದವರಲ್ಲಿ ಓರ್ವ ಹುಡುಗಿಗೆ ತಾಳಿ ಕಟ್ಟುವ ಸಮಾರಂಭದ ಬಗ್ಗೆ ತಿಳಿದ ಗುರುಗಳು ಬಧಕಗಳ ಬಗ್ಗೆ ವವರಿಸಿ, ಈಗ ಇದನ್ನು ತ್ಯಜಿಸುವುದರಿಂದ ನಮ್ಮವರೆ ಮನಸ್ಸಿಗೆ ನೋವಾದರೂ ಮುಂದಿನ ಪೀಳಿಗೆ ಇದರ ಫಲವನ್ನು ಸಂತೋಷದಿಂದ ಅನುಭವಿಸಲಿ ಎಂದು ಪತ್ರ ಬರೆದರು. ಪತ್ರವನ್ನೋದಿದ ಕೊಚ್ಚು ರಾಮನ್ ವೈದ್ಯರು ತಾನು ಏರ್ಪಡಿಸಲು ನಿರ್ಧರಿಸಿದ ಸಮಾರಂಭವನ್ನು ರದ್ದುಪ್ಡಿಸಿದರು. ಹೀಗೆ ಒಬ್ಬ ವ್ಯಕ್ತಿಯ ಶಾಂತವಾದ ಕೆಲವು ಹಿತೋಪದೇಶದಿಂದ ಸಮಾಜದಲ್ಲಿ ಇಂತಹ ಪರಿವರ್ತನೆ ಯಾಗುವುದಾದರೆ, ಈ ಮಹಾಮಹಿಮನ ಅಸಾಮಾನ್ಯ ಶಕ್ತಿಯ ಅರಿವು ಯಾರಿಗಾದರೂ ಆಗದಿರಲು ಸಾಧ್ಯವೇ? ಅಂತೆಯೇ ಅಳಿಯ ಸಂತಾನ ಪದ್ಧತಿಯ ಬಾಧಕಗಳನ್ನು ವಿವರಿಸಿ ಅದನ್ನು ತಡೆಹಿಡಿದ ಖ್ಯಾತಿ ಇವರದು. ಸೀಮಂತ ಕಾರ್ಯಕ್ರಮದಲ್ಲಿ ಆಗುವ ದುಂದು ವೆಚ್ಚಕ್ಕೆ ತಡೆ ಹ್ಶಾಕಿದರು. ವಿವಾಹ ವಿಚ್ಛೇದನ ಹಾಗೂ ಪುನರ್ರವಿವಾಹ ಅನಿವಾರ್ಯವಾದಲ್ಲಿ ಮಾಡಿಕೊಳ್ಳಬಹುದು ಎಂದರು. ಬಹು ಪತ್ನಿತ್ವ ಹಾಗೂ ಬಹು ಪತಿತ್ವ ಸಮಾಜಕ್ಕೆ ಹಿತವಲ್ಲ ಎಂದು ಅದಕ್ಕೂ ತಡೆಹಾಕಿದರು. ಸರಳ ವಿವಾಹಕ್ಕೆ ಒತ್ತು ನೀಡಿದರು. ಅಂತ್ಯ ಕ್ರಿಯೆಯಲ್ಲಿ ಮಾಡುವ ದುಂದು ವೆಚ್ಚಕ್ಕೆ ವಿರೋಧ ವ್ಯಕ್ತ ಪ್ಡಿಸಿದರು. ಹೊಸ ದೇವಸ್ಥಾನಗಳ ನಿರ್ಮಾಣವನ್ನು ವಿರೋಧಿಸಿದರು.
ಮಹಿಳಾ ಶೋಷಣೆಯ ದುಷ್ಟ ಪದ್ಧತಿಯನ್ನು ನಿಲ್ಲಿಸಿದ ಒಂದು ಸನ್ನಿವೇಶ
ಈಳವ ಮತ್ತಿತರ ನಿಮ್ನ ವರ್ಗದ ಸ್ತ್ರೀಯರು ಎದೆ ಭಾಗವನ್ನು ಕುಪ್ಪಸದಿಂದ ಮುಚ್ಚದೆ, ಉಚ್ಚ ಜಾತಿಯವರು ಎದುರಾದಾಗ, ಸೆರಗು ಸರಿಸಿ, ಅವರಿಗೆ ಗೌರವ ತೋರಿಸುವ ಕೆಟ್ಟ ಸಂಪ್ರದಾಯವಿತ್ತು. ಇದೊಂದು ಹೆಣ್ಣಿನ ಶೋಷಣೆಯ ನಿಕೃಷ್ಟ ಪದ್ಧತಿಯೆಂದು, ಗುರುಗಳು ಆ ಕ್ರಮವನ್ನು ನಿಲ್ಲಿಸಲು ಅಪ್ಪಣೆ ಕೊಟ್ಟಿದ್ದರು. ಹೀಗೆ ಗುರುಗಳು ತಾವು ಬೋಡಿಸಿದ ವಿಷಯಗಳನ್ನೆಲ್ಲಾ ಸ್ವತಹ್ ಆಚರಿಸುತ್ತಿದ್ದರು. ತಾವು ಪ್ರತಿಷ್ಟಾಪಿಸಿದ ದೇವಸ್ಥಾನಗಳ ಬಾಗಿಲು ಮಾನವರೆಲ್ಲರಿಗೂ ತೆರೆದಿರಬೇಕೆಂಬುದೇ ಅವರ ಇಚ್ಛೆಯಾಗಿರುತ್ತಿತ್ತು. ಅಂತರ್ಧರ್ಮೀಯ ವಿವಾಹಕ್ಕೂ ಗುರುಗಳು ಪ್ರೋತ್ಸಾಹಿಸಿದ್ದರು.

ಶಿಕ್ಷಕರ ದಿನಾಚರಣೆ ವಿಶೇಷ – ಆಂಜನೇಯಕ್ಯಾಂಪ್’ನ ಶಾಲೆಯಲ್ಲಿ ಮಾದರಿ ಶಿಕ್ಷಕ

ಕೃಪೆ: ಸುವರ್ಣ ನ್ಯೂಸ್.
ಆಂಜನೇಯಕ್ಯಾಂಪ್’ನ ಶಾಲೆಯಲ್ಲಿ ಮಾದರಿ ಶಿಕ್ಷಕ
image
ಇವತ್ತು(ಸೆ.5) ಶಿಕ್ಷಕರ ದಿನಾಚರಣೆ ಆಚರಣೆ.. ಗುರುಗಳನ್ನ ಸ್ಮರಿಸುವ  ಶುಭ ದಿನ. ಗಂಗಾವತಿ ತಾಲೂಕಿನ ಆಂಜನೇಯ ಕ್ಯಾಂಪ್​ನಲ್ಲೊಬ್ಬರು ಮಾದರಿ ಶಿಕ್ಷಕರಿದ್ದಾರೆ. ಇವರು ಇಬ್ಬರು ಮಕ್ಕಳ ಶಿಕ್ಷಣಕ್ಕಾಗಿ ಸಂಬಳದ ಅರ್ಧ ಹಣ ಖರ್ಚು ಮಾಡುತ್ತಿದ್ದಾರೆ.  ಆಂಜನೇಯ ಕ್ಯಾಂಪ್​ನಲ್ಲಿರುವ ಸರ್ಕಾರಿ ಶಾಲೆಗೆ ಈ ವರ್ಷದ ಸುರೇಶ್ ಹಾಗೂ ದೇವಿಶ್ರೀ ಎನ್ನುವ ಇಬ್ಬರೇ ಮಕ್ಕಳು ಪ್ರವೇಶ ಪಡೆದಿರುವುದು.
ಈ ಇಬ್ಬರಿಗೂ ಇರುವ ಶಿಕ್ಷಕ ತಂದೆ ತಾಯಿ ಸಹಾಯಕ ಎಲ್ಲವೂ ಈ ಗಣೇಶ್ ಮಾಸ್ಟರ್. ಇಬ್ಬರೂ ಮಕ್ಕಳನ್ನು ಮನೆಯಿಂದ ರೆಡಿ ಮಾಡಿ ಶಾಲೆಗೆ ಕರೆದುಕೊಂಡು ಬರುತ್ತಾರೆ. ಶಾಲೆಯಲ್ಲಿ ಮಕ್ಕಳಿಗೆ ಅಕ್ಷರ ಕಲಿಸುತ್ತಾರೆ. ಇನ್ನು ಮಕ್ಕಳಿಗೆ ಸಹಾಯಕನಾಗಿ ಮಕ್ಕಳ ಎಲ್ಲ ಕೆಲಸ ಮಾಡುತ್ತಾರೆ. ದಿನನಿತ್ಯ ಶಾಲೆಯಿಂದ ಸುಮಾರು ಎರಡು ಮೂರು ಕಿಲೋ ಮೀಟರ್ ದೂರದ ಇಬ್ಬರ ಮನಗೆ ಹೋಗಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬಂದು ಪಾಠ ಮಾಡುತ್ತಾರೆ. ಯಾವುದೇ ಸಂಕುಚಿತ ಮನೋಭಾವ ಇಲ್ಲದೆ ಮಕ್ಕಳಿಗೆ ಅಕ್ಷರ ಕಲಿಸುವ ಗಣೇಶ್ ಮಾಸ್ಟರ್ ಮಕ್ಕಳನ್ನು ತನ್ನ ಮಕ್ಕಳಂತೆ ಕಾಣುತ್ತಿದ್ದಾರೆ. ಇದಲ್ಲದೆ ಮಕ್ಕಳು ಇನ್ನುಳಿದ ಮಕ್ಕಳೊಂದಿಗೆ ಬೆರೆಯಲಿ ಎಂಬ ಕಾರಣಕ್ಕೆ ಮೂರು ಕಿಲೋ ಮೀಟರ್ ಪಕ್ಕದಲ್ಲಿರುವ ಮುಷ್ಟೂರ್ ಕ್ಯಾಂಪಿನ ಶಾಲೆಗೆ ಕರೆದುಕೊಂಡು ಹೋಗಿ ಇನ್ನುಳಿದ ಮಕ್ಕಳೊಂದಿಗೆ ಶೈಕ್ಷಣಿಕ ಪಾಠ ಹಾಗೂ ಪಠ್ಯೇತರ ಚಟುವಟಿಕೆನ್ನು ಕಲಿಸುತ್ತಾರೆ.
ಪ್ರತಿಯೊಂದು ಶಾಲೆಗಳು ಇಂಥ ಒಬ್ಬ ಶಿಕ್ಷಕರಿದಿದ್ದರೆ ನಮ್ಮ ಸರ್ಕಾರಿ ಶಾಲೆಗಳಿಗೆ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿರಲಿಲ್ಲ..
———————-
‘ಡಾ. ಸರ್ವೆಪಲ್ಲಿ ರಾಧಾಕೃಷ್ಣನ್’ 
image
ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ. ಶಿಕ್ಷಕರಾಗಿದ್ದ ‘ಡಾ. ಸರ್ವೆಪಲ್ಲಿ ರಾಧಾಕೃಷ್ಣನ್’ ೧೯೬೨ ರಲ್ಲಿ ಭಾರತದ ರಾಷ್ಟ್ರಪತಿಯಾದಾಗ ಇವರ ಶಿಷ್ಯರು ಮತ್ತು ಸ್ನೇಹಿತರು ಸೆಪ್ಟೆಂಬರ್ ೫ ರಂದು ತಮ್ಮ ಹುಟ್ಟಿದ ದಿನವನ್ನು ಆಚರಿಸಲು ಹೇಳಿದಾಗ ತಮ್ಮ ಶಿಕ್ಷಕ ಹುದ್ದೆಯನ್ನು ಅಪಾರ ಗೌರವಿಸುತಿದ್ದ ರಾಧಾಕೃಷ್ಣನ್ ನೀವು ನನ್ನ ಹುಟ್ಟಿದ ದಿನವನ್ನು ಬೇರೆಯಾಗಿಯೇ ಆಚರಿಸುವುದಾದರೆ ಇಂದಿನಿಂದ “ಸೆಪ್ಟೆಂಬರ್ ೫ “ನ್ನು ‘ಶಿಕ್ಷಕರ ದಿನ’ವನ್ನಾಗಿ ಆಚರಿಸಲು ಹೇಳಿದರು. ಅಂದಿನಿಂದ(1962) ಅವರ ಜನ್ಮದಿನವನ್ನ ಶಿಕ್ಷಕರ ದಿನವನ್ನಾಗಿ ಆಚರಿಸುತ್ತಾ ಅವರು ಗೈದಿರುವ ಶಿಕ್ಷಣ ಕ್ಷೇತ್ರಕ್ಕೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ.
ಜನನ ಬಾಲ್ಯ ಹಾಗೂ ವಿದ್ಯಾಭ್ಯಾಸ
‘ಸರ್ವಪಲ್ಲಿ ರಾಧಾಕೃಷ್ಣನ್’ ಜನಿಸಿದ್ದು ದಕ್ಷಿಣ ಭಾರತದ ತಮಿಳುನಾಡಿನ ‘ತಿರುತ್ತಣಿ’ ಎಂಬಲ್ಲಿ ಸೆಪ್ಟೆಂಬರ್ ೫, ೧೮೮೮ ರಲ್ಲಿ.(ಸರ್ವಪಲ್ಲಿ ರಾಧಾಕೃಷ್ಣನ್ ಅವರ ಪುತ್ರ ಸರ್ವಪಲ್ಲಿ ಗೋಪಾಲ್ ಅವರು ತಮ್ಮ ತಂದೆಯ ಬಗ್ಗೆ ಬರೆದ ಜೀವನಚರಿತ್ರೆಯಲ್ಲಿ ರಾಧಾಕೃಷ್ನನ್ ಅವರ ಜನ್ಮದಿನಾಂಕ 20-09-1887 ಎಂದಿದೆ) ಸರ್ವಪಲ್ಲಿಎನ್ನುವುದು ಮನೆತನದ ಹೆಸರಾದರೆ, ‘ರಾಧಾಕೃಷ್ಣನ್’ ಎನ್ನುವುದು ಅವರ ತಂದೆ-ತಾಯಿ ಇಟ್ಟ ಮುದ್ದಿನ ಹೆಸರು. ತಂದೆ ಸರ್ವಪಲ್ಲಿ ವೀರಸ್ವಾಮಿ ತಾಯಿ ಸೀತಮ್ಮ. ಇವರು ಜಮೀನ್ದಾರರ ಬಳಿ ದಿನಗೂಲಿ ನೌಕರರಾಗಿ ಸೇವೆಗೈಯುತ್ತಾ ಮಗನ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರು. ರಾಧಾಕೃಷ್ಣನ್ ಅವರ ತಂದೆಗೆ ತಮ್ಮ ಮಗನನ್ನು ಪುರೋಹಿತನನ್ನಾಗಿ ಮಾಡುವ ಹಂಬಲವಿತ್ತು. ಬರುವ ದಿನಗೂಲಿಯಲ್ಲಿ ತುಂಬು ಕುಟುಂಬವನ್ನು ಸಾಗಿಸಲು ಕಷ್ಟ ಪಡುವ ಸಂದರ್ಭದಲ್ಲಿ ‘ರಾಧಾಕೃಷ್ಣನ್‌’ಗೆ ಓದಬೇಕೆನ್ನುವ ಅಪಾರ ಹಂಬಲ! ‘ಸ್ಕಾಲರ್‌ಶಿಪ್ ಹಣ’ದಲ್ಲಿಯೇ ಎಲ್ಲ ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢಶಾಲೆಯ ಶಿಕ್ಷಣವನ್ನು ಮುಗಿಸಿದ ರಾಧಾಕೃಷ್ಣನ್, ಮದ್ರಾಸ್‌ (ಈಗಿನ ಚೆನ್ನೈ) ಕ್ರಿಶ್ಚಿಯನ್ ಕಾಲೇಜ್‌ ನಲ್ಲಿ ‘ತತ್ವಜ್ಞಾನ’ ವಿಷಯದ ಮೇಲೆ ‘ಬಿ.ಎ’ ಮತ್ತು ‘ಎಂ.ಎ. ಪದವಿ’ಗಳನ್ನು ಪಡೆದು ಕೊಂಡರು. ‘ಸ್ನಾತಕೋತ್ತರ ಪದವಿ’ಯಲ್ಲಿ ರಾಧಾಕೃಷ್ಣನ್ ಮಂಡಿಸಿದ ಪ್ರಬಂಧ ‘ದಿ ಎಥಿಕ್ಸ್ ಆಫ್ ವೇದಾಂತ’ ಅವರ ಬದುಕಿನ ದಿಕ್ಕನ್ನೇ ಬದಲಾಯಿಸಿತು. ಕೇವಲ ೨೦ ವರ್ಷದ ಬಾಲಕನ ತಲೆಯಲ್ಲಿದ್ದ ‘ಹಲವು ಬಗೆಯ ಸಿದ್ಧಾಂತಗಳು’, ‘ವೇದಾಂತ ವಿಚಾರಗಳು’ ಮುಂದೊಂದು ದಿನ ಅವರನ್ನು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತವೆ, ಎಂದು ಅವರ ಕಾಲೇಜು ಶಿಕ್ಷಕರು ಆಗಲೇ ಗುರುತಿಸಿದ್ದರು.
ವಿವಾಹ
ವೆಲ್ಲೂರಿನಲ್ಲಿರುವಾಗಲೇ ಕೇವಲ ೧೬ ನೇ ವಯಸ್ಸಿನಲ್ಲಿಶಿವಕಾಮಮ್ಮ ಎಂಬುವವರನ್ನು ಬಾಳಸಂಗಾತಿಯನ್ನಾಗಿಸಿಕೊಂಡ ರಾಧಾಕೃಷ್ಣನ್, ೧೯೦೯ ರಲ್ಲಿ ಮದ್ರಾಸ್ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸಹಾಯಕ ಉಪನ್ಯಾಸಕರಾಗಿ ಅಚ್ಚುಮೆಚ್ಚಿನ ಶಿಕ್ಷಕ ಸೇವೆಯನ್ನಾರಂಭಿಸಿದರು.
ಮಹಾ ಶಿಕ್ಷಕನಾಗಿ
ಭಾರತದ ಸನಾತನ ಧರ್ಮವಾದ ಹಿಂದೂ ಧರ್ಮದ ಸಾರ, ವೇದ, ಉಪನಿಷತ್, ಜೈನ ತತ್ವಜ್ಞಾನ, ಶಂಕರ ರಾಮಾನುಜ, ಮಧ್ವ, ಪ್ಲೇಟೋ, ಪ್ಲಾಟಿನಸ್, ಕಾಂತ್, ಬ್ರ್ಯಾಡ್ಲೆ ಮುಂತಾದ ಮಹನೀಯರ ತತ್ವಜ್ಞಾನವನ್ನು ಆಳವಾಗಿ ಅಧ್ಯಯನ ಕೈಗೊಂಡರು. ಸತತ ಅಧ್ಯಯನ ಮತ್ತು ಕಠಿಣ ಪರಿಶ್ರಮದಿಂದ ಹಂತ ಹಂತವಾಗಿ ಮೇಲೇರುತ್ತಾ ಮುನ್ನಡೆದ ರಾಧಾಕೃಷ್ಣನ್, 1918ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ, ತತ್ವಜ್ಞಾನ ವಿಭಾಗದ ಉಪನ್ಯಾಸಕರಾಗಿ ಆಯ್ಕೆಯಾದರು. ದೇಶ ವಿದೇಶಗಳ ವಿವಿಧ ತತ್ವಜ್ಞಾನ ಪತ್ರಿಕೆಗಳಲ್ಲಿ ತಮ್ಮ ಆಳ ಮತ್ತು ಹರಿತವಾದ ವಿಚಾರಗಳನ್ನು ಹೊಂದಿದ್ದ ಲೇಖನಗಳನ್ನು ಬರೆಯುತ್ತಾ ಸಾಗಿದ ರಾಧಾಕೃಷ್ಣನ್, ‘ದಿ ಫಿಲಾಸಫಿ ಆಫ್ ರವೀಂದ್ರನಾಥ್ ಠ್ಯಾಗೋರ್’ ಎಂಬ ಮೊದಲ ಪುಸ್ತಕ ಬರೆದರು. ಇವರು ತೆಲುಗಿನಲ್ಲಿ ತಮ್ಮ ಸಹಿಯನ್ನು “ರಾಧಾಕ್ರಿಶ್ಣಯ್ಯ”ಎಂದು ಹಾಕುತಿದ್ದರು. ಮೈಸೂರಿನಲ್ಲಿ ಇವರ ಹೆಸರಿನ ರಸ್ತೆಯೊಂದಿದೆ.
ತತ್ವಶಾಸ್ತ್ರದಲ್ಲಿ ಅನುಪಮ ಕೊಡುಗೆ
ಭಾರತೀಯ ಪುಸ್ತಕೋದ್ಯಮದಲ್ಲಿ ಮಿಂಚುತ್ತಾ ಸಾಗಿದ ಇವರು, ಮುಂದೆ ‘ಜಿನೀನ್ ಮೆನಿಫೆಸ್ಟೇಷನ್ ಆಫ್ ಇಂಡಿಯನ್ ಸ್ಪಿರಿಟ್’ ಮತ್ತು ‘ದಿ ರೀಜನ್ ಆಫ್ ರಿಲಿಜಿಯನ್ ಇನ್ ಕಾಂಟೆಂಪರರಿ ಫಿಲಾಸಫಿ’ ಎನ್ನುವ ಪುಸ್ತಕಗಳನ್ನು ಸಹ ಬರೆದಿದ್ದಾರೆ. ತಮ್ಮ ಅಪಾರವಾದ ಪಾಂಡಿತ್ಯದಿಂದಾಗಿ ದೇಶ ವಿದೇಶಗಳಲ್ಲಿ ಮನೆಮಾತಾಗಿದ್ದರು. ಇವರ ತತ್ವಜ್ಞಾನಕ್ಕೆ ಶರಣಾದ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ‘ಧರ್ಮ ಮತ್ತು ನೀತಿಶಾಸ್ತ್ರ’ ಎನ್ನುವ ವಿಷಯದ ಮೇಲೆ ಉಪನ್ಯಾಸ ನೀಡುವಂತೆ ಆಹ್ವಾನಿಸಿತು. ಸಪ್ತಸಾಗರಗಳಾಚೆ ಭಾರತದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿದು, ಭಾರತೀಯ ಸ್ವಾತಂತ್ರ್ಯಕ್ಕಾಗಿಯೂ ಹೋರಾಡಿದ ರಾಧಾಕೃಷ್ಣನ್, ಭಾರತೀಯ ಸನಾತನ ಧರ್ಮ, ತತ್ವಜ್ಞಾನ ಕುರಿತು ವಿದೇಶಿಯರಿಗೆ ಮನಮುಟ್ಟುವಂತೆ ಮನವರಿಕೆ ಮಾಡಿಕೊಟ್ಟು ಬಂದರು.
ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಳು
೧೯೩೧ ರಲ್ಲಿ ಆಂಧ್ರ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಆಯ್ಕೆಯಾದ ರಾಧಾಕೃಷ್ಣನ್, ಐದು ವರ್ಷಗಳ ಕಾಲ ತಾವೊಬ್ಬ ಉತ್ತಮ ಶಿಕ್ಷಣ ಸುಧಾರಕರೂ ಹೌದು ಎಂಬುದನ್ನು ತಮ್ಮ ಸೇವಾವಧಿಯಲ್ಲಿ ತೋರಿಸಿಕೊಟ್ಟರು. ಇವರ ಅವಧಿಯಲ್ಲಿ ವಿಶ್ವವಿದ್ಯಾಲಯ ಅನೇಕ ಶಿಕ್ಷಣ ಮತ್ತು ಶಿಕ್ಷಣೇತರ ಸುಧಾರಣೆಗಳನ್ನು ಕಂಡಿತು.೧೯೩೯ ರಲ್ಲಿ ಬನಾರಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಆಯ್ಕೆಯಾದರು. ಅಲ್ಲಿಯೂ ತಮ್ಮ ಅನುಭವವನ್ನು ಧಾರೆ ಎರೆಯುವ ಮೂಲಕ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ರಾಧಾಕೃಷ್ಣನ್ ಅವರನ್ನು, ೧೯೪೮ ರಲ್ಲಿ ವಿಶ್ವವಿದ್ಯಾಲಯ ಶಿಕ್ಷಣ ಆಯೋಗದ ಮುಖ್ಯಸ್ಥರನ್ನಾಗಿ ಸರಕಾರ ನೇಮಿಸಿತು. ೧೯೪೯ ರಲ್ಲಿ ಸೋವಿಯತ್ ರಷ್ಯಾಕ್ಕೆ ಭಾರತದ ರಾಯಭಾರಿಯಾಗಿ ನೇಮಕಗೊಂಡ ರಾಧಾಕೃಷ್ಣನ್, ಸ್ಟಾಲಿನ್‌ನಂತಹ ಮೇಧಾವಿಗಳ ಸರಿಸಮನಾಗಿ ನಿಲ್ಲುವ ವ್ಯಕ್ತಿತ್ವವನ್ನು ಬೆಳೆಸಿಕೊಂಡರು.
ಮೊಟ್ಟಮೊದಲ ಉಪರಾಷ್ಟ್ರಪತಿಯಾಗಿ
೧೯೫೨ ರಲ್ಲಿ ಭಾರತದ ಶಿಕ್ಷಕನೊಬ್ಬ ಮೊಟ್ಟಮೊದಲ ಉಪರಾಷ್ಟ್ರಪತಿಯಾಗಿ ನೇಮಕಗೊಂಡ ‘ರಾಧಾಕೃಷ್ಣನ್’, ರಾಜ್ಯಸಭೆಯಲ್ಲಿ ಸಂಸ್ಕೃತ ಶ್ಲೋಕಗಳ ಮೂಲಕ ಎಲ್ಲ ಸಂಸತ್ ಸದಸ್ಯರ ಗಮನ ಸೆಳೆಯುತ್ತಿದ್ದರು. ‘ರಾಧಾಕೃಷ್ಣನ್’ ಅವರ ಅಪಾರ ಸೇವೆಯನ್ನು ಗುರುತಿಸಿ ಗೌರವಿಸಿದ ಭಾರತ ಸರಕಾರ ಉಪರಾಷ್ಟ್ರಪತಿ ಹುದ್ದೆಯಲ್ಲಿದಾಗಲೇ ಅವರಿಗೆ ೧೯೫೪ ರಲ್ಲಿ ಪ್ರತಿಷ್ಠಿತ ‘ಭಾರತ ರತ್ನ ಪ್ರಶಸ್ತಿ’ ನೀಡಿ ಗೌರವಿಸಿತು.ಆಗ ರಾಧಾಕೃಷ್ಣನ್ ಅವರು ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ವಿಭಾಗದಲ್ಲಿ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಗುರು ಉಪರಾಷ್ಟ್ರಪತಿಯಾಗಿ ದೆಹಲಿಗೆ ಹೊರಡುವ ಸಂದರ್ಭದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು, ಅವರನ್ನು ಕಳುಹಿಸಿ ಕೊಡಲು ಸಾರೋಟನ್ನು ತಂದು ಅಲಂಕರಿಸಿ, ಕುದುರೆಯ ಬದಲು ತಾವೇ ಕುದುರೆಗಳಂತೆ, ರಾಧಾಕೃಷ್ಣನ್ ಅವರು ಕುಳಿತ ಸಾರೋಟನ್ನು ಪ್ರೀತಿಪೂರ್ವಕವಾಗಿ ರೈಲ್ವೆ ನಿಲ್ದಾಣದವರೆಗೂ ಎಳೆದು ಕೊಂಡು ಹೋಗಿ, ಭಾವಪೂರ್ಣ ವಿದಾಯ ಹೇಳಿದ್ದರು. ಈ ಸನ್ನಿವೇಶವನ್ನು ಕಂಡು ರಾಧಾಕೃಷ್ಣನ್ ಅವರು ಭಾವುಕರಾಗಿದ್ದರಂತೆ. ಅವರು ಆಗಾಗ ಈ ಸಂದರ್ಭವನ್ನು ನೆನೆಸಿಕೊಳ್ಳುತ್ತಿದ್ದರು.ಇದೇ ಸಂದರ್ಭದಲ್ಲಿ ರಾಧಾಕೃಷ್ಣನ್ ಕುರಿತು ಅಮೆರಿಕಾದಲ್ಲಿ ‘ಫಿಲಾಸಫಿ ಆಫ್ ಡಾ.ಸರ್ವಪಲ್ಲಿ ರಾಧಾಕೃಷ್ಣನ್’ ಪುಸ್ತಕ ಬಿಡುಗಡೆಗೊಂಡಿತು. ‘ಡಾ. ರಾಜೇಂದ್ರ ಪ್ರಸಾದ್’ ನಂತರ, ೧೯೬೨ ರಲ್ಲಿ ಭಾರತದ ಎರಡನೇ ರಾಷ್ಟ್ರಪತಿಯಾಗಿ ಆಯ್ಕೆಯಾದ ರಾಧಾಕೃಷ್ಣನ್, ತಮ್ಮ ಅಧಿಕಾರಾವಧಿಯಲ್ಲಿ ದೇಶದ ಸರ್ವತೋಮುಖ ಏಳಿಗೆಗೆ ಅವಿರತ ಶ್ರಮಿಸಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸಂಬಂಧಗಳನ್ನು ಉನ್ನತೀಕರಣಗೊಳಿಸುತ್ತಾ, ದೇಶದೊಳಗಿನ ಆಂತರಿಕ ಕಲಹಗಳಿಗೆ ತಿಲಾಂಜಲಿ ನೀಡುತ್ತಾ, ದೇಶವನ್ನು ಸುಭಿಕ್ಷವಾಗಿಸಿದ ಕೀರ್ತಿ ‘ಡಾ.ರಾಧಾ ಕೃಷ್ಣನ್’ ಅವರಿಗೆ ಸಲ್ಲುತ್ತದೆ.
‘ ಶಿಕ್ಷಕರ ದಿನಾಚರಣೆಯ ದಿನ’
image
ಭಾರತೀಯ ಶಿಕ್ಷಣ ಕ್ಷೇತ್ರಕ್ಕೊಂದು ಅರ್ಥವತ್ತಾದ ಚೌಕಟ್ಟನ್ನು ನೀಡುವ ಮೂಲಕ, ಶಿಕ್ಷಣ ಕ್ಷೇತ್ರ, ತತ್ವಜ್ಞಾನ, ದೇಶದ ಅಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್, ಭಾರತೀಯರ ಮನದಲ್ಲಿ ಅಚ್ಚಳಿಯದ ಛಾಪೊತ್ತಿದ್ದಾರೆ. ಇವರು ಓರ್ವ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದರು. ಇವರ ಜನ್ಮದಿನವಾದ ಸೆಪ್ಟೆಂಬರ್ ೫ರಂದು ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ.
ಬಿರುದುಗಳು
ಬ್ರಿಟನ್ ಆಕ್ಸ್ ಫಾರ್ಡ್ ವಿ.ವಿ. ಗೌರವ ಡಾಕ್ಟರೇಟ್ (೧೯೫೨ ),ಅಮೇರಿಕ ಹಾರ್ವರ್ಡ್ ವಿ.ವಿ. ಗೌರವ ಡಾಕ್ಟರೇಟ್ (೧೯೫೩ ),ಲಂಡನ್ ಪ್ರವಾಸದಲ್ಲಿದ್ದಾಗ “ಆರ್ಡರ್ ಆಫ್ ಮೆರಿನ್”ಪ್ರಶಸ್ತಿ,ವ್ಯಾಟಿಕನ್ ಸಿಟಿ ಪೋಪ್ ಜಾನ್ ರಿಂದ “ನೈಟ್ ಆಫ್ ದ ಆರ್ಮಿ.ಕೇಂದ್ರ ಸಾಹಿತ್ಯ ಅಕಾಡೆಮಿ ಫೆಲೋಶಿಪ್ -೧೯೬೮ , ಭಾರತೀಯ ವಿದ್ಯಾಭವನ “ಬ್ರಹ್ಮ ವಿದ್ಯಾ ಭಾಸ್ಕರ “ಬಿರುದು,”ಟೆಂಪಲ್ಟನ್”ಪ್ರಶಸ್ತಿ ೧೯೭೩ರಲ್ಲಿ. “೧೯೫೪ ರಲ್ಲಿ ಪ್ರತಿಷ್ಠಿತ ‘ಭಾರತ ರತ್ನ ಪ್ರಶಸ್ತಿ’ ಗೌರವ
ನಿಧನ
ತಮ್ಮ ‘ರಾಷ್ಟ್ರಪತಿ ಹುದ್ದೆ’ಯ ಅಧಿಕಾರಾವಧಿ ಮುಗಿದ ನಂತರ ೧೯೬೭ ರಲ್ಲಿ ತಮ್ಮ ‘ನಿವೃತ್ತಿ ಜೀವನ’ವನ್ನು ಮದ್ರಾಸಿನ ‘ಮೈಲಾಪುರ’ದಲ್ಲಿರುವ ತಮ್ಮ ಅಧಿಕೃತ ನಿವಾಸ ‘ಗಿರಿಜಾ’ದಲ್ಲಿ ಕಳೆದ ರಾಧಾಕೃಷ್ಣನ್, ೧೯೭೫ ರ ಏಪ್ರಿಲ್ ೧೭ ರಂದು ಇಹಲೋಕದ ಯಾತ್ರೆಯನ್ನು ಮುಗಿಸಿದರು.